Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...