Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....