Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...