Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...

ನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ನಕಲಿ ಔಷಧ ತಯಾರಿಕೆ ಹಾಗೂ ವಿತರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಈ ಅಕ್ರಮ ಜಾಲವು ಕರ್ನಾಟಕ ಮಾತ್ರವಲ್ಲದೆ ದೇಶದ ಇತರ ಐದು ರಾಜ್ಯಗಳಿಗೂ ಹರಡಿರುವುದು ಬೆಳಕಿಗೆ...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...