Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...