Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...