Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...