Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...