Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...