Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...