Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...