Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...