Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...