Homeಮುಖಪುಟಮಹಾರಾಷ್ಟ್ರ: ನಾಳೆ ಬಹುಮತ ಸಾಬೀತುಪಡಿಸಲು ಉದ್ಧವ್‌ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

ಮಹಾರಾಷ್ಟ್ರ: ನಾಳೆ ಬಹುಮತ ಸಾಬೀತುಪಡಿಸಲು ಉದ್ಧವ್‌ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿಗೆ ನಾಳೆ ತೆರೆ ಬೀಳುವ ಸಾಧ್ಯತೆಯಿದೆ. ಗುರುವಾರ (ಜೂನ್ 30) ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ಸೂಚಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ವಿಧಾನಸಭೆ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರಿಗೆ ಪತ್ರ ಬರೆದು ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಕರೆದು, ಬಹುಮತ ಸಾಬೀತು ಪಡಿಸುವಂತೆ ಮನವಿ ಮಾಡಿದ್ದಾರೆ.

ಬಹುಮತ ಸಾಬೀತುಪಡಿಸಬೇಕೆಂಬ ಸೂಚನೆ ಬೆನ್ನಲ್ಲೇ, 16 ಬಂಡಾಯ ಶಾಸಕರು ಸಂಭವನೀಯ ಅನರ್ಹತೆಗೆ ಇನ್ನೂ ಪ್ರತಿಕ್ರಿಯಿಸದ ಕಾರಣ ರಾಜ್ಯಪಾಲರ ಕೋರಿಕೆ ಕಾನೂನುಬಾಹಿರ ಎಂದು ಆರೋಪಿಸಿ ಸಿಎಂ ಉದ್ಧವ್‌ ಠಾಕ್ರೆ ತಂಡವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಗುವಾಹಟಿಯಿಂದ ಮುಂಬೈಗೆ ತೆರಳಲಿರುವ ಬಂಡಾಯ ನಾಯಕ ಏಕನಾಥ್‌ ಶಿಂಧೆ

“16 ಶಾಸಕರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಜುಲೈ 11 ರವರೆಗೆ ಮುಂದೂಡಿರುವಾಗ ಬಹುಮತ ಸಾಬೀತು ಪಡಿಸಲು ಹೇಗೆ ಸೂಚಿಸಬಹುದು? ಈ ಶಾಸಕರು ತಮ್ಮ ಅನರ್ಹತೆಯ ಸ್ಥಿತಿಯನ್ನು ನಿರ್ಧರಿಸುವವರೆಗೆ ಮತ್ತು ನೋಟಿಸ್ ಕಳುಹಿಸಿದ ಇತರ ವಿಷಯಗಳು ನಿರ್ಧಾರವಾಗುವರೆಗೂ ವಿಶ್ವಾಸಮತ ಯಾಚನೆಯಲ್ಲಿ ಹೇಗೆ ಭಾಗವಹಿಸುತ್ತಾರೆ?. “ಸುಪ್ರೀಂ ಕೋರ್ಟ್‌ನಲ್ಲಿ ಈ ವಿಷಯದ ಅಂತಿಮ ವಿಚಾರಣೆ ನಡೆಯದಿದ್ದರೂ ಬಹುಮತ ಯಾಚನೆ ನಡೆಸಿದರೆ ಇದು ನ್ಯಾಯಾಲಯದ ನಿಂದನೆ ಪ್ರಕ್ರಿಯೆಯಾಗುತ್ತದೆ” ಎಂದು ಎಂದು ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಅಸ್ಸಾಂನ ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ತಂಗಿರುವ ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಬಂಡಾಯ ಶಿವಸೇನಾ ಶಾಸಕರು ಬಹುಮತ ಪರೀಕ್ಷೆಯಲ್ಲಿ ಭಾಗವಹಿಸಲು ಮುಂಬೈಗೆ ಹಿಂದಿರುಗುವ ಮೊದಲು ಗೋವಾಕ್ಕೆ ತೆರಳಲಿದ್ದಾರೆ.

ಏಕನಾಥ್ ಶಿಂಧೆ ಮತ್ತು ಕೆಲವು ಬಂಡಾಯ ಶಾಸಕರು ಇಂದು ಬೆಳಿಗ್ಗೆ ಅಸ್ಸಾಂನ ಮುಖ್ಯ ನಗರದಲ್ಲಿರುವ ಕಾಮಾಕ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಳೆ (ಗುರುವಾರ) ಮುಂಬೈಗೆ ಹಿಂತಿರುಗುವುದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಂಡಾಯ ಬಣದ ನಾಯಕ ಏಕನಾಥ್ ಶಿಂಧೆ ಸೇರಿದಂತೆ 16 ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ತಂಡ ಡೆಪ್ಯುಟಿ ಸ್ಪೀಕರ್‌ಗೆ ಮನವಿ ಮಾಡಿತ್ತು, ನಂತರ ಬಂಡಾಯ ಪಾಳಯವು ಈ ಕ್ರಮವನ್ನು ಕಾನೂನುಬಾಹಿರ ಎಂದು ಕರೆದು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.

ತಮ್ಮ ಸಂಭಾವ್ಯ ಅನರ್ಹತೆಯ ನೋಟಿಸ್‌ಗೆ ಪ್ರತಿಕ್ರಿಯಿಸಲು ನ್ಯಾಯಾಲಯವು ಬಂಡಾಯ ಸೇನಾ ಶಾಸಕರಿಗೆ ಜುಲೈ 12 ರವರೆಗೆ ಕಾಲಾವಕಾಶ ನೀಡಿದೆ. ಆದರೆ, ಬಂಡಾಯಗಾರರು ಪ್ರತಿಕ್ರಿಯಿಸುವ ದಿನಾಂಕಕ್ಕಿಂತ ಮುಂಚೆಯೇ ಬಹುಮತವನ್ನು ಸಾಬೀತುಪಡಿಸಲು ರಾಜ್ಯಪಾಲರು ಸೂಚಿಸಿದ್ದಾರೆ.


ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...