Homeಮುಖಪುಟ'ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?': ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಎದುರಿಸುತ್ತಿರುವ ಶಿವಸೇನೆಯ ನಾಯಕರು ಬಹಿರಂಗವಾಗಿ ಆಕ್ರೋಶ ಹೊರಹಾಕಲು ಶುರು ಮಾಡಿದ್ದಾರೆ. ಆದಿತ್ಯ ಠಾಕ್ರೆ ಕೂಡ “ನಿಮಗೆ ಧೈರ್ಯವಿದ್ದರೆ ಶಿವಸೇನೆ ಬಿಟ್ಟು ಪಕ್ಷಾಂತರ ಮಾಡಿ ಹೋರಾಡಿ. ನಾವು ಮಾಡಿದ್ದು ತಪ್ಪು, ಉದ್ಧವ್ (ಠಾಕ್ರೆ) ನಾಯಕತ್ವ ತಪ್ಪು ಮತ್ತು ನಾವೆಲ್ಲರೂ ತಪ್ಪು ಎಂದು ನಿಮಗೆ ಅನಿಸಿದ್ದರೆ, ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಾವು ಸಿದ್ಧರಿದ್ದೇವೆ” ಎಂದು ಸವಾಲು ಹಾಕಿದ್ದಾರೆ.

ಇಂದು ಬೆಳಗ್ಗೆ ಸಂಸದ ಸಂಜಯ್ ರಾವತ್ “ನೀವು ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ? ನೀವು ಹಿಂತಿರುಗಲೇಬೇಕು” ಎಂದು ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ. ನರಹರಿ ಝಿರ್ವಾಲ್, ಶಿವಸೇನೆ ಸಲ್ಲಿಸಿರುವ ಅನರ್ಹತೆಯ ಮನವಿಯ ಮೇಲೆ 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

 

ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯಿಂದ ಬಂದಿರುವ ನರಹರಿ ಝಿರ್ವಾಲ್, ಫೆಬ್ರವರಿ 2021 ರಿಂದ ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಯಲ್ಲಿದ್ದಾರೆ. ಬಂಡಾಯ ಶಾಸಕರಿಗೆ ನೋಟಿಸ್ ನೀಡುವುದರ ಜೊತೆಗೆ ಸಚಿವ ಏಕನಾಥ್ ಶಿಂಧೆ ಅವರ ಪಾಳಯವು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದ್ದಾರೆ.

34 ಬಂಡಾಯ ಶಾಸಕರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದರೂ, ಯಾವುದೇ ಶಾಸಕರು ಅದನ್ನು ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರ ಕಚೇರಿಗೆ ಸಲ್ಲಿಸಿಲ್ಲ. ಬದಲಿಗೆ ಜೂನ್ 22 ರಂದು ಬೆಳಿಗ್ಗೆ 11:30 ಕ್ಕೆ ಅನಾಮಧೇಯ ಇಮೇಲ್ ಐಡಿ ಮೂಲಕ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ರಾತ್ರಿ ಗುಜರಾತ್‌ನಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆಯ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...