Homeಮುಖಪುಟ'ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?': ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಎದುರಿಸುತ್ತಿರುವ ಶಿವಸೇನೆಯ ನಾಯಕರು ಬಹಿರಂಗವಾಗಿ ಆಕ್ರೋಶ ಹೊರಹಾಕಲು ಶುರು ಮಾಡಿದ್ದಾರೆ. ಆದಿತ್ಯ ಠಾಕ್ರೆ ಕೂಡ “ನಿಮಗೆ ಧೈರ್ಯವಿದ್ದರೆ ಶಿವಸೇನೆ ಬಿಟ್ಟು ಪಕ್ಷಾಂತರ ಮಾಡಿ ಹೋರಾಡಿ. ನಾವು ಮಾಡಿದ್ದು ತಪ್ಪು, ಉದ್ಧವ್ (ಠಾಕ್ರೆ) ನಾಯಕತ್ವ ತಪ್ಪು ಮತ್ತು ನಾವೆಲ್ಲರೂ ತಪ್ಪು ಎಂದು ನಿಮಗೆ ಅನಿಸಿದ್ದರೆ, ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಾವು ಸಿದ್ಧರಿದ್ದೇವೆ” ಎಂದು ಸವಾಲು ಹಾಕಿದ್ದಾರೆ.

ಇಂದು ಬೆಳಗ್ಗೆ ಸಂಸದ ಸಂಜಯ್ ರಾವತ್ “ನೀವು ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ? ನೀವು ಹಿಂತಿರುಗಲೇಬೇಕು” ಎಂದು ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ. ನರಹರಿ ಝಿರ್ವಾಲ್, ಶಿವಸೇನೆ ಸಲ್ಲಿಸಿರುವ ಅನರ್ಹತೆಯ ಮನವಿಯ ಮೇಲೆ 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

 

ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯಿಂದ ಬಂದಿರುವ ನರಹರಿ ಝಿರ್ವಾಲ್, ಫೆಬ್ರವರಿ 2021 ರಿಂದ ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಯಲ್ಲಿದ್ದಾರೆ. ಬಂಡಾಯ ಶಾಸಕರಿಗೆ ನೋಟಿಸ್ ನೀಡುವುದರ ಜೊತೆಗೆ ಸಚಿವ ಏಕನಾಥ್ ಶಿಂಧೆ ಅವರ ಪಾಳಯವು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದ್ದಾರೆ.

34 ಬಂಡಾಯ ಶಾಸಕರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದರೂ, ಯಾವುದೇ ಶಾಸಕರು ಅದನ್ನು ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರ ಕಚೇರಿಗೆ ಸಲ್ಲಿಸಿಲ್ಲ. ಬದಲಿಗೆ ಜೂನ್ 22 ರಂದು ಬೆಳಿಗ್ಗೆ 11:30 ಕ್ಕೆ ಅನಾಮಧೇಯ ಇಮೇಲ್ ಐಡಿ ಮೂಲಕ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ರಾತ್ರಿ ಗುಜರಾತ್‌ನಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆಯ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...