Homeಮುಖಪುಟಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯನ್ನು ಬಂಡಾಯ ಶಿವಸೇನಾ ಸಚಿವ ಏಕನಾಥ್ ಶಿಂಧೆ ಹುಟ್ಟುಹಾಕಿದ್ದಾರೆ. ಏಕನಾಥ್ ಶಿಂಧೆ ಅವರು ಪಕ್ಷದ ವಿರುದ್ಧ ಬಂಡಾಯದಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಬಿಜೆಪಿ ಮಹಾರಾಷ್ಟ್ರ ಘಟಕದ ಮುಖ್ಯಸ್ಥರು ತಿಳಿಸಿದ್ದಾರೆ.

ಸಚಿವ ಏಕನಾಥ್ ಶಿಂಧೆ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವಲ್ಲಿ ಬಿಜೆಪಿ ಪಾತ್ರವಿದೆ ಆರೋಪ ಕೇಳಿ ಬಂದಿದೆ. ಇದರ ಹಿನ್ನೆಲೆ, ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಲ್ಲಿ ತಮ್ಮ ಪಕ್ಷವು ಯಾವುದೇ ಪಾತ್ರವನ್ನು ವಹಿಸಿಲ್ಲ ಎಂದು ಬಿಜೆಪಿಯ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಶುಕ್ರವಾರ ಪ್ರತಿಪಾದಿಸಿದ್ದಾರೆ.

ಆದರೂ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ “ಕೆಲವು ಕೆಲಸಕ್ಕಾಗಿ” ಗುರುವಾರ ದೆಹಲಿಗೆ ಭೇಟಿ ನೀಡಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್ ರಾವತ್‌‌

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಬಿಜೆಪಿ ಪಾತ್ರ ವಹಿಸಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದ ಹಿನ್ನೆಲೆ ಚಂದ್ರಕಾಂತ್ ಪಾಟೀಲ್ ಅವರ ಹೇಳಿಕೆಗಳು ಬಂದಿವೆ.

ಇತ್ತ ಬಂಡಾಯ ಸೇನೆಯ ನಾಯಕ ಏಕನಾಥ್ ಶಿಂಧೆ, ಗುವಾಹಟಿಯಲ್ಲಿನ ತಮ್ಮ ಬಂಡಾಯ ಶಾಸಕರನ್ನು ಉದ್ದೇಶಿಸಿ ಮಾತನಾಡುತ್ತಾ, “ರಾಷ್ಟ್ರೀಯ ಪಕ್ಷ” ತನ್ನ ಬಂಡಾಯವನ್ನು ಬೆಂಬಲಿಸಿದ್ದು, ಎಲ್ಲಾ ಸಹಾಯವನ್ನು ಭರವಸೆ ನೀಡಿದೆ ಎಂದು ಬಿಜೆಪಿ ಹೆಸರು ಉಲ್ಲೇಖಿಸದೆ ತಿಳಿಸಿದ್ದರು.

ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ್ ಪಾಟೀಲ್, ”ಈಗಿನ ಶಿವಸೇನೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಆಂತರಿಕ ಕಚ್ಚಾಟಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸದ್ಯ 2024ರ ಚುನಾವಣೆಯ ತಯಾರಿಯಲ್ಲಿ ಬಿಜೆಪಿ ನಿರತವಾಗಿದೆ” ಎಂದು ಮಾಹಿತಿ ನೀಡಿದ್ದರು.

“ಪವಾರ್ ಮತ್ತು ಶಿವಸೇನೆಯ ಸಂಜಯ್ ರಾವತ್ ತಮ್ಮ ವಾಕ್ ಸ್ವಾತಂತ್ರ್ಯದ ಹಕ್ಕನ್ನು ವಿಪರೀತವಾಗಿ ಚಲಾಯಿಸುತ್ತಿದ್ದಾರೆಂದು. ನಾನು ದಿನನಿತ್ಯದ ಸುದ್ದಿಗಳನ್ನು ನೋಡುತ್ತಿಲ್ಲ, ಹಾಗಾಗಿ ಶಿವಸೇನೆಯಲ್ಲಿ ನಿಖರವಾಗಿ ಏನಾಗುತ್ತಿದೆ ಎಂದು ತಿಳಿದಿಲ್ಲ ಎಂದಿದ್ದಾರೆ. ಮುಂಬೈ ಮೂಲದ ಬಿಜೆಪಿ ಕಾರ್ಯಾಧ್ಯಕ್ಷ ಮೋಹಿತ್ ಕಾಂಬೋಜ್ ಅವರು ಬಂಡಾಯ ಶಿವಸೇನಾ ನಾಯಕರೊಂದಿಗೆ ಗುವಾಹಟಿಯಲ್ಲಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದಾಗ, “ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ಅವರು ಯಾರಿಗಾದರೂ ಸಹಾಯ ಮಾಡಲು ಹೋಗಿರಬಹುದು, ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

ಇತ್ತ, ಮಹಾರಾಷ್ಟ್ರ ಮೈತ್ರಿಕೂಟದ ನಾಯಕ ಶರದ್ ಪವಾರ್ ಅವರಿಗೆ ಒಕ್ಕೂಟ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆ ಶುಕ್ರವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಸಚಿವರ ಇಂತಹ ಬೆದರಿಕೆಗಳನ್ನು ಒಪ್ಪುತ್ತಾರೆಯೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...