Homeಮುಖಪುಟಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

ಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

- Advertisement -
- Advertisement -

ಅನರ್ಹತೆ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸಲು ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ಸುಪ್ರೀಂ ಕೋರ್ಟ್ ಜುಲೈ 12 ರವರೆಗೆ ಸಮಯ ನೀಡಿದೆ. ಇದರ ಬಳಿಕ ವಿಶ್ವಾಸಮತ ಯಾಚನೆ ನಡೆಸಲು ಇರುವ ಸಾಂವಿಧಾನಿಕ ನಿಬಂಧನೆಗಳ ಬಗ್ಗೆ ತಿಳಿಯಲು ಬಂಡಾಯಗಾರರು ವಕೀಲರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಿತ್ರ ಪಕ್ಷ ಎನ್‌ಸಿಪಿಗೆ ಸೇರಿರುವ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರು ಕಳೆದ ವಾರ ಏಕನಾಥ್ ಶಿಂಧೆ ಮತ್ತು ಇತರ 15 ಬಂಡಾಯ ಶಾಸಕರಿಗೆ ಅನರ್ಹತೆ ನೋಟಿಸ್ ನೀಡಿದ್ದರು.

ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಬಾಕಿ ಉಳಿದಿರುವ ಸಮಸ್ಯೆಗಳು ಇತ್ಯರ್ಥವಾಗುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ಪ್ರತಿಪಾದಿಸಿದ್ದರು. ಆದರೆ, ಅನಗತ್ಯ ತೊಡಕುಗಳನ್ನು ಉಂಟುಮಾಡುವ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್, “ಯಾವುದಾದರೂ ಅಕ್ರಮ ನಡೆದರೆ, ನೀವು ಯಾವಾಗಲಾದರೂ ನ್ಯಾಯಾಲಯಕ್ಕೆ ಹೋಗಬಹುದು” ಎಂದಿತ್ತು.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಬಣ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಇನ್ನೊಂದು ಬಣ ಯಾವುದೇ ಒಪ್ಪಂದಕ್ಕೆ ಬರಲು ನಿರಾಕರಿಸಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಈ ವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲು ರಾಜ್ಯ ಸರ್ಕಾರವನ್ನು ಕೇಳಬಹುದು ಎಂದು ಮೂಲಗಳು ತಿಳಿಸಿವೆ.

ಬಂಡಾಯ ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಪ್ರಸ್ತುತ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಜುಲೈ 5 ರವರೆಗೆ ಹೋಟೆಲ್‌ನಲ್ಲಿ ತಮ್ಮ ವಾಸ್ತವ್ಯವನ್ನು ವಿಸ್ತರಿಸಬಹುದು. ಶಿಂಧೆ ಅವರು ಸುಮಾರು 50 ಶಾಸಕರ ಬೆಂಬಲವನ್ನು ಹೊಂದಿದ್ದು, ಅದರಲ್ಲಿ ಶಿವಸೇನೆಯ 40 ಶಾಸಕರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನು, ಮುಂಬೈನಲ್ಲಿರುವ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಹಲವು ಬಿಜೆಪಿ ನಾಯಕರು ಬಂಡಾಯ ಶಿಂಧೆ ಬಣದೊಂದಿಗೆ ಸರ್ಕಾರ ರಚಿಸಲು ಚಿಂತನ ಮಂಥನ ನಡೆಸಿದ್ದಾರೆ. ಏಕನಾಥ್ ಶಿಂಧೆ ಅವರ ಸರ್ಕಾರ ರಚನೆಯ ಪ್ರಸ್ತಾಪಕ್ಕೆ ನಾವು ಮುಕ್ತರಾಗಿದ್ದೇವೆ ಎಂದು ಪಕ್ಷದ ನಾಯಕ ಸುಧೀರ್ ಮುಂಗಂಟಿವಾ ಹೇಳಿದ್ದಾರೆ.

ಅನರ್ಹತೆ ನೋಟಿಸ್‌ನ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಇದನ್ನು “ಬಾಳಾಸಾಹೇಬರ ಹಿಂದುತ್ವದ ವಿಜಯ” ಎಂದು ಬಣ್ಣಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಸ್ವಲ್ಪ ಸಮಯದ ನಂತರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...