Homeಮುಖಪುಟಮಹಾರಾಷ್ಟ್ರ: ಗುವಾಹಟಿಯಿಂದ ಮುಂಬೈಗೆ ತೆರಳಲಿರುವ ಬಂಡಾಯ ನಾಯಕ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಗುವಾಹಟಿಯಿಂದ ಮುಂಬೈಗೆ ತೆರಳಲಿರುವ ಬಂಡಾಯ ನಾಯಕ ಏಕನಾಥ್‌ ಶಿಂಧೆ

ಬಂಡಾಯ ಶಾಸಕರಿಗೆ ಪತ್ರ ಬರೆದಿರುವ ಉದ್ಧವ್ ಠಾಕ್ರೆ, ಮುಂಬೈಗೆ ಬಂದು ತನ್ನೊಂದಿಗೆ ಮಾತನಾಡುವಂತೆ ಮನವಿ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ “ಶೀಘ್ರದಲ್ಲೇ ಮುಂಬೈಗೆ ತೆರಳಿ ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುತ್ತೇನೆ” ಎಂದು ಮಂಗಳವಾರ ಹೇಳಿದ್ದಾರೆ.

“ಗುವಾಹಟಿಯಲ್ಲಿ ನನ್ನೊಂದಿಗೆ 50 ಜನರಿದ್ದಾರೆ, ಅವರು ತಮ್ಮ ಸ್ವಂತ ಇಚ್ಛೆಯಿಂದ ಮತ್ತು ಹಿಂದುತ್ವಕ್ಕಾಗಿ ನನ್ನೊಂದಿಗೆ ಬಂದಿದ್ದಾರೆ. ನಾವೆಲ್ಲರೂ ಶೀಘ್ರದಲ್ಲೇ ಮುಂಬೈಗೆ ಹೋಗುತ್ತೇವೆ” ಎಂದು ಏಕನಾಥ್ ಶಿಂಧೆ ಗುವಾಹಟಿಯ ಐಷಾರಾಮಿ ಹೋಟೆಲ್‌ನಿಂದ ಹೊರಬಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬೈಗೆ ಬಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರೊಂದಿಗೂ ಮಾತನಾಡುವುದಾಗಿ ಹೇಳಿದ್ದಾರೆ. ಈ ವೇಳೆ ಇತರ ಬಂಡಾಯ ಶಾಸಕರು ಉಪಸ್ಥಿತರಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ವರದಿಗಳು ಸೂಚಿಸುವಂತೆ, ಬಿಜೆಪಿಯೊಂದಿಗಿನ ಸಮಾಲೋಚನೆಗಾಗಿ ಏಕನಾಥ್‌ ಶಿಂಧೆ ಇಂದು ಸಂಜೆ ಮುಂಬೈ ಅಥವಾ ದೆಹಲಿಗೆ ಹೋಗಬಹುದು ಎನ್ನಲಾಗಿದೆ. ಇತ್ತ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ದೆಹಲಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ನಾನು ಶಿವಸೇನೆಯನ್ನು ಬಿಡುತ್ತಿಲ್ಲ. ನಾನೇ ನಿಜವಾದ ಶಿವಸೇನೆ” ಎಂದು ಏಕನಾಥ್‌ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಸುಮಾರು 15 ರಿಂದ 20 ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಮುಂಬೈಗೆ ಮರಳಲು ಬಯಸುತ್ತಾರೆ ಎಂಬ ಉದ್ಧವ್ ಠಾಕ್ರೆ ಬೆಂಬಲಿಗರ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ.

ಇತ್ತ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆಯ ಬಂಡಾಯ ಶಾಸಕರಿಗೆ ಪತ್ರ ಬರೆದು, ತಮ್ಮೊಂದಿಗೆ ಖುದ್ದಾಗಿ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ನಾನು ನಿಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಇನ್ನೂ ಸಮಯವಿದೆ. ದಯವಿಟ್ಟು ಬನ್ನಿ. ನನ್ನೊಂದಿಗೆ ಕುಳಿತುಕೊಳ್ಳಿ, ಶಿವಸೈನಿಕರು ಮತ್ತು ಸಾರ್ವಜನಿಕರ ಮನಸ್ಸಿನಲ್ಲಿರುವ ಎಲ್ಲಾ ಅನುಮಾನಗಳನ್ನು ತೆಗೆದುಹಾಕಿ. ನೀವು ಕೆಲವು ದಿನಗಳಿಂದ ಗುವಾಹಟಿಯಲ್ಲಿ ಸಿಕ್ಕಿಬಿದ್ದಿದ್ದೀರಿ, ನಾನು ನಿಮ್ಮ ಬಗ್ಗೆ ವಿವರಗಳನ್ನು ಪಡೆಯುತ್ತಿದ್ದೇನೆ. ನಿಮ್ಮಲ್ಲಿ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ನೀವು ಹೃದಯಪೂರ್ವಕವಾಗಿ ಶಿವಸೇನೆಯವರು. ನಾವು ಮಾತನಾಡೋಣ, ಮಾತಾಡಿ ಒಂದು ದಾರಿ ಹುಡುಕಿಕೊಳ್ಳೋಣ” ಎಂದು ಪತ್ರದಲ್ಲಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...