Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...