Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...