Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...