Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...