Homeಮುಖಪುಟಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

- Advertisement -
- Advertisement -

ಮಹಾರಾಷ್ಟ್ರ ಶಿವಸೇನೆಯ ಮುಖಂಡ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಿವಸೇನಾ ಪಕ್ಷದ ಶಾಸಕರು ಬಂಡಾಯವೆದ್ದು ಗೌಹಾತಿ ತಲುಪಿರುವುದರಿಂದ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಏಕನಾಥ್ ಶಿಂಧೆ ತನಗೆ 6 ಪಕ್ಷೇತರ ಶಾಸಕರ ಬೆಂಬಲ ಸಹ ಇದೆಯೆಂದು ಹೇಳಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಗೆ ಎಲ್ಲಾ ಶಿವಸೇನೆ ಶಾಸಕರು ಸಭೆಗೆ ಹಾಜರಾಗಬೇಕೆಂದು, ತಪ್ಪಿದ್ದಲ್ಲಿ ತಮ್ಮ ಸದಸ್ಯ ಸ್ಥಾನ ರದ್ದುಗೊಳಿಸುವುದಾಗಿ ಉದ್ಧವ್ ಠಾಕ್ರೆ ಸಂದೇಶ ರವಾನಿಸಿದ್ದಾರೆ. ಆದರೆ ಅದನ್ನು ಏಕನಾಥ್ ಶಿಂಧೆ ಮಾನ್ಯತೆಯಿಲ್ಲದ ಹೇಳಿಕೆ ಎಂದು ಕರೆದಿದ್ದಾರೆ.

ಈ ಎಲ್ಲದರ ನಡುವೆ ಸರ್ಕಾರ ಉಳಿಯಬೇಕಾದರೆ ಅಥವಾ ಬೀಳಿಸಬೇಕಾದರೆ ಬೇಕಾಗುವ ಶಾಸಕರ ಸಂಖ್ಯೆಗಳೆಷ್ಟು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಮಹಾರಾಷ್ಟ್ರ ವಿಧಾನಸಭೆಯು 288 ಸದಸ್ಯರನ್ನು ಹೊಂದಿದೆ. ಒಬ್ಬ ಸದಸ್ಯ ಸಾವನಪ್ಪಿದ್ದು, ಇಬ್ಬರು ಜೈಲಿನಲ್ಲಿದ್ದಾರೆ. ಹಾಗಾಗಿ ಸದಸ್ಯಬಲ 285ಕ್ಕೆ ಕುಸಿದಿದೆ. ಅಲ್ಲಿಗೆ ಯಾವುದೇ ಸರ್ಕಾರಕ್ಕೆ ಬಹುಮತ ತೋರಿಸಲು 143 ಸದಸ್ಯರ ಬೆಂಬಲ ಬೇಕಿದೆ.

ಸದ್ಯಕ್ಕೆ ಮಹಾವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ಬಳಿ 152 ಶಾಸಕರಿದ್ದಾರೆ. 55 ಶಿವಸೇನೆ, 51 ಎನ್‌ಸಿಪಿ ಮತ್ತು 44 ಕಾಂಗ್ರೆಸ್ ಸದಸ್ಯರಿದ್ದು ಉಳಿದವರು ಪಕ್ಷೇತರರಾಗಿದ್ದಾರೆ.

55 ಶಿವಸೇನೆ ಶಾಸಕರಲ್ಲಿ 40 ಜನ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯವೆದ್ದ ಕಾರಣ ಶಿವಸೇನೆಯ ಬಲ ಕೇವಲ 15ಕ್ಕೆ ಕುಸಿದಿದೆ. ಹಾಗಾಗಿ ಸರ್ಕಾರದ ಬಲ 102ಕ್ಕೆ ಕುಸಿಯುತ್ತದೆ. ಏಕನಾಥ್ ಶಿಂಧೆಯ ಗುಂಪು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡರಷ್ಟು ಸದಸ್ಯರನ್ನು (37) ಹೊಂದಿರಬೇಕು.

ಏಕನಾಥ್ ಶಿಂಧೆ ತಮ್ಮೊಡನೆ 37ಕ್ಕಿಂತ ಹೆಚ್ಚು ಶಿವಸೇನೆ ಶಾಸಕರನ್ನು ಹೊಂದಿದ್ದಲ್ಲಿ ಅವರು ತಮ್ಮದೇ ಪ್ರತ್ಯೇಕ ಪಕ್ಷವನ್ನು ಘೋಷಿಸಿಕೊಳ್ಳಬಹುದು. ಅಲ್ಲದೆ ಅವರು ಶಿವಸೇನೆಯ ಅಧಿಕೃತ ಚಿಹ್ನೆ ಪಡೆಯಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಈ ರೀತಿಯ ಪ್ರಕರಣಗಳು ಎದುರಾದಾಗ ಬಹುಮತ ಹೊಂದಿದವರಿಗೆ ಪಕ್ಷದ ಚಿಹ್ನೆ ನೀಡಿದ ಉದಾಹರಣೆಗಳಿವೆ.

ಒಂದು ವೇಳೆ ಏಕನಾಥ್ ಶಿಂಧೆ ಜೊತೆಗಿರುವ ಶಿವಸೇನೆಯ 40 ಶಾಸಕರು ಬಿಜೆಪಿ ಸೇರುವುದಕ್ಕಾಗಿ ರಾಜೀನಾಮೆ ನೀಡಿದ್ದಲ್ಲಿ ಬಹುಮತಕ್ಕೆ 123 ಸ್ಥಾನಗಳು ಅಗತ್ಯ ಬೀಳುತ್ತವೆ. ಮಹಾವಿಕಾಸ್ ಅಘಾಡಿ ಸರ್ಕಾರದ ಬಳಿ 102 ಸದಸ್ಯರಿದ್ದರೆ ಬಿಜೆಪಿ ಬಳಿ 106 ಸದಸ್ಯರಿರುತ್ತಾರೆ. ಆದರೆ ಹೆಚ್ಚಿನ ಪಕ್ಷೇತರರು ಬಿಜೆಪಿ ಬೆಂಬಲಿಸುವ ಸಾಧ್ಯತೆಯಿದೆ.

ಏಕನಾಥ್ ಶಿಂಧೆ ಜೊತೆಗೆ ಹೋಗಿದ್ದ ಒಬ್ಬ ಶಿವಸೇನೆಯ ಶಾಸಕ ವಾಪಸ್ ಬಂದಿದ್ದು, ತನ್ನನ್ನು ಅಪಹರಿಸಿದ್ದರು ಎಂದು ದೂರಿದ್ದಾರೆ. ಇದೇ ರೀತಿ ಕನಿಷ್ಟ ಅರ್ಧದಷ್ಟು ಜನರನ್ನು ಶಿವಸೇನೆ ವಾಪಸ್ ಕರೆಸಿಕೊಂಡಲ್ಲಿ ಸರ್ಕಾರ ಉಳಿಯುತ್ತದೆ. ಇಲ್ಲದಿದ್ದಲ್ಲಿ ಅಸ್ಥಿರತೆ ಉಂಟಾಗಿ ಸರ್ಕಾರ ಬಿದ್ದುಹೋಗಲಿದೆ. ಬಿಜೆಪಿ ಬಹುಮತ ತೋರಿಸಿ ಅಧಿಕಾರಕ್ಕೆ ಬರಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬಹುದಾಗಿದೆ.

ಇದನ್ನೂ ಓದಿ; ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...