ಒಕ್ಕೂಟ ಸರ್ಕಾರವು ಕನಿಷ್ಠ 15 ಬಂಡಾಯ ಶಿವಸೇನೆ ಶಾಸಕರಿಗೆ ಭಾನುವಾರದಿಂದ ಸಿಆರ್ಪಿಎಫ್ ಕಮಾಂಡೋಗಳ ವೈ-ಪ್ಲಸ್ ಭದ್ರತೆಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸತ್, ಲತಾಬಾಯಿ ಸೋನಾವಣೆ, ಪ್ರಕಾಶ್ ಸುರ್ವೆ, ಸದಾನಂದ್ ಸರಣಾವಂಕರ್, ಯೋಗೇಶ್ ದಾದಾ ಕದಂ, ಪ್ರತಾಪ್ ಸರ್ನಾಯಕ್, ಯಾಮಿನಿ ಜಾಧವ್, ಪ್ರದೀಪ್ ಜೈಸ್ವಾಲ್, ಸಂಜಯ್ ರಾಥೋಡ್, ದಾದಾಜಿ ಭೂಸೆ, ದಿಲೀಪ್ ಲಾಂಡೆ, ಬಾಲಾಜಿ ಕಲ್ಯಾಣರ್, ಸಂದೀಪನ್ ಭೂಮಾರೆ ಅವರಿಗೆ ಭದ್ರತೆ ಒದಗಿಸಲಾಗಿದೆ.
ಜೊತೆಗೆ ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಅವರ ಕುಟುಂಬಗಳಿಗೂ ಭದ್ರತೆಯನ್ನು ಈ ರಕ್ಷಣಾ ತಂಡಗಳು ನೀಡಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು
Ramesh Bornare,Mangesh Kudalkar, Sanjay Shirsat, Latabai Sonawane,Prakas Surve, Sadanand Saranavnkar,Yogesh Dada Kadam,Pratap Sarnaik, Yamini Jadhav,Pradeep Jaiswal,Sanjay Rathod,Dadaji Bhuse,Dilip Lande,Balaji Kalyanar,Sandipan Bhumare are provided CRPF's security cover: Sources
— ANI (@ANI) June 26, 2022
ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಸನ್ನಿವೇಶದಿಂದಾಗಿ ಬಂಡಾಯ ಶಾಸಕರು ಮತ್ತು ಅವರ ಕುಟುಂಬಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ ಕೇಂದ್ರ ಭದ್ರತಾ ಏಜೆನ್ಸಿಗಳು ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡುದ್ದವು. ಇದರ ಮೇರೆಗೆ ಶಾಸಕರಿಗೆ ಭದ್ರತೆಯನ್ನು ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ನಾಲ್ಕರಿಂದ ಐದು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಕಮಾಂಡೋಗಳು, ಪಾಳಿಯಲ್ಲಿ, ಬಂಡಾಯ ಶಾಸಕರು ಮಹಾರಾಷ್ಟ್ರಕ್ಕೆ ಬಂದ ನಂತರ ಅವರಿಗೆ ರಕ್ಷಣೆ ನೀಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ



ಭಾಜಪದ ಗಂಜಿ ಗಿರಾಕಿಗಳಿಗೆ ಭದ್ರತೆ ಕೊಡಲೇಬೇಕಲ್ವಾ… ಅದರಲ್ಲೇನು ವಿಶೇಷ ?