Homeಮುಖಪುಟಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

- Advertisement -
- Advertisement -

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರ್ಕಾರ ರಚನೆಯಾಗಿ ಬಹಳ ಸಮಯದ ನಂತರ ಕೊನೆಗೂ ಶನಿವಾರ (ಡಿ.21) ಖಾತೆ ಹಂಚಿಕೆಯಾಗಿದೆ.

ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದ ಏಕನಾಥ್ ಶಿಂದೆ ಅವರಿಗೆ ಇದೀಗ ಗೃಹ ಖಾತೆಯೂ ಕೈ ತಪ್ಪಿದ್ದು ನಿರಾಸೆಯಾಗಿದೆ. ಪ್ರಬಲ ಖಾತೆಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಯಶಸ್ವಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಯನ್ನು ಕೊಟ್ಟು ಸಮಾಧಾನ ಮಾಡಲಾಗಿದೆ. ಮತ್ತೊಬ್ಬರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಯೋಜನೆ ಮತ್ತು ಅಬಕಾರಿ ಖಾತೆ ನೀಡಲಾಗಿದೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರು ಗೃಹ ಖಾತೆಯ ಜೊತೆಗೆ ಇಂಧನ (ನವೀಕರಿಸಬಹುದಾದ ಇಂಧನ ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಮತ್ತು ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಖಾತೆಗಳನ್ನೂ ನೋಡಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಪ್ರಮುಖ ಖಾತೆಗಳಲ್ಲಿ ಒಂದಾದ ಕಂದಾಯ ಪಡೆದುಕೊಂಡಿದ್ದಾರೆ. ಕಳೆದ ಮಹಾಯುತಿ ಸರ್ಕಾರದಲ್ಲಿ ಕಂದಾಯ ಇಲಾಖೆಯನ್ನು ನಿಭಾಯಿಸಿದ್ದ ಪ್ರಭಾವಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಈ ಬಾರಿ ಜಲಸಂಪನ್ಮೂಲ (ಗೋದಾವರಿ, ಕೃಷ್ಣಾ ಕಣಿವೆ ಇಲಾಖೆ) ನೀಡಲಾಗಿದೆ. ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಸಿಎಂ ಫಡ್ನವಿಸ್‌ ಅವರಿಗೆ ಆಪ್ತರಾಗಿರುವ ಬಿಜೆಪಿಯ ಗಿರೀಶ್ ಮಹಾಜನ್ ಅವರಿಗೆ ಜಲಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ಕೊಡಲಾಗಿದೆ. ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಗಣೇಶ್ ನಾಯಕ್ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ. ಶಿವಸೇನೆಯ ಗುಲಾಬ್ರಾವ್ ಪಾಟೀಲ್ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಮತ್ತು ಶಿವಸೇನೆಯ ಮತ್ತೊಬ್ಬ ಶಾಸಕ ದಾದಾಜಿ ಭೂಸೆ ಅವರಿಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ.

ಶಿವಸೇನೆಯ ಉದಯ್ ಸಾಮಂತ್ ಮೂರನೇ ಬಾರಿಗೆ ಕೈಗಾರಿಕೆ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂದೆ ಸರ್ಕಾರಗಳಲ್ಲಿ ಖಾತೆಯನ್ನೇ ಹೊಂದಿದ್ದರು.

ಬಿಜೆಪಿಯ ಪಂಕಜಾ ಮುಂಡೆ ಪರಿಸರ, ಹವಾಮಾನ ಬದಲಾವಣೆ ಮತ್ತು ಪಶುಸಂಗೋಪನೆ ಖಾತೆಗಳನ್ನು ಪಡೆದರೆ, ಅವರ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ ಖಾತೆಗಳು ದೊರೆತಿವೆ.

ಎನ್‌ಸಿಪಿಯ ಹಸನ್ ಮುಶ್ರಿಫ್ ಅವರು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಪಕ್ಷದ ಇನ್ನೊಬ್ಬ ಶಾಸಕ ಮಾಣಿಕ್ರಾವ್ ಕೊಕಾಟೆಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...