Homeಮುಖಪುಟಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

- Advertisement -
- Advertisement -

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರ್ಕಾರ ರಚನೆಯಾಗಿ ಬಹಳ ಸಮಯದ ನಂತರ ಕೊನೆಗೂ ಶನಿವಾರ (ಡಿ.21) ಖಾತೆ ಹಂಚಿಕೆಯಾಗಿದೆ.

ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದ ಏಕನಾಥ್ ಶಿಂದೆ ಅವರಿಗೆ ಇದೀಗ ಗೃಹ ಖಾತೆಯೂ ಕೈ ತಪ್ಪಿದ್ದು ನಿರಾಸೆಯಾಗಿದೆ. ಪ್ರಬಲ ಖಾತೆಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಯಶಸ್ವಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಯನ್ನು ಕೊಟ್ಟು ಸಮಾಧಾನ ಮಾಡಲಾಗಿದೆ. ಮತ್ತೊಬ್ಬರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಯೋಜನೆ ಮತ್ತು ಅಬಕಾರಿ ಖಾತೆ ನೀಡಲಾಗಿದೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರು ಗೃಹ ಖಾತೆಯ ಜೊತೆಗೆ ಇಂಧನ (ನವೀಕರಿಸಬಹುದಾದ ಇಂಧನ ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಮತ್ತು ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಖಾತೆಗಳನ್ನೂ ನೋಡಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಪ್ರಮುಖ ಖಾತೆಗಳಲ್ಲಿ ಒಂದಾದ ಕಂದಾಯ ಪಡೆದುಕೊಂಡಿದ್ದಾರೆ. ಕಳೆದ ಮಹಾಯುತಿ ಸರ್ಕಾರದಲ್ಲಿ ಕಂದಾಯ ಇಲಾಖೆಯನ್ನು ನಿಭಾಯಿಸಿದ್ದ ಪ್ರಭಾವಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಈ ಬಾರಿ ಜಲಸಂಪನ್ಮೂಲ (ಗೋದಾವರಿ, ಕೃಷ್ಣಾ ಕಣಿವೆ ಇಲಾಖೆ) ನೀಡಲಾಗಿದೆ. ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಸಿಎಂ ಫಡ್ನವಿಸ್‌ ಅವರಿಗೆ ಆಪ್ತರಾಗಿರುವ ಬಿಜೆಪಿಯ ಗಿರೀಶ್ ಮಹಾಜನ್ ಅವರಿಗೆ ಜಲಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ಕೊಡಲಾಗಿದೆ. ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಗಣೇಶ್ ನಾಯಕ್ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ. ಶಿವಸೇನೆಯ ಗುಲಾಬ್ರಾವ್ ಪಾಟೀಲ್ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಮತ್ತು ಶಿವಸೇನೆಯ ಮತ್ತೊಬ್ಬ ಶಾಸಕ ದಾದಾಜಿ ಭೂಸೆ ಅವರಿಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ.

ಶಿವಸೇನೆಯ ಉದಯ್ ಸಾಮಂತ್ ಮೂರನೇ ಬಾರಿಗೆ ಕೈಗಾರಿಕೆ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂದೆ ಸರ್ಕಾರಗಳಲ್ಲಿ ಖಾತೆಯನ್ನೇ ಹೊಂದಿದ್ದರು.

ಬಿಜೆಪಿಯ ಪಂಕಜಾ ಮುಂಡೆ ಪರಿಸರ, ಹವಾಮಾನ ಬದಲಾವಣೆ ಮತ್ತು ಪಶುಸಂಗೋಪನೆ ಖಾತೆಗಳನ್ನು ಪಡೆದರೆ, ಅವರ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ ಖಾತೆಗಳು ದೊರೆತಿವೆ.

ಎನ್‌ಸಿಪಿಯ ಹಸನ್ ಮುಶ್ರಿಫ್ ಅವರು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಪಕ್ಷದ ಇನ್ನೊಬ್ಬ ಶಾಸಕ ಮಾಣಿಕ್ರಾವ್ ಕೊಕಾಟೆಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...