Homeಮುಖಪುಟಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

- Advertisement -
- Advertisement -

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರ್ಕಾರ ರಚನೆಯಾಗಿ ಬಹಳ ಸಮಯದ ನಂತರ ಕೊನೆಗೂ ಶನಿವಾರ (ಡಿ.21) ಖಾತೆ ಹಂಚಿಕೆಯಾಗಿದೆ.

ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದ ಏಕನಾಥ್ ಶಿಂದೆ ಅವರಿಗೆ ಇದೀಗ ಗೃಹ ಖಾತೆಯೂ ಕೈ ತಪ್ಪಿದ್ದು ನಿರಾಸೆಯಾಗಿದೆ. ಪ್ರಬಲ ಖಾತೆಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಯಶಸ್ವಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಯನ್ನು ಕೊಟ್ಟು ಸಮಾಧಾನ ಮಾಡಲಾಗಿದೆ. ಮತ್ತೊಬ್ಬರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಯೋಜನೆ ಮತ್ತು ಅಬಕಾರಿ ಖಾತೆ ನೀಡಲಾಗಿದೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರು ಗೃಹ ಖಾತೆಯ ಜೊತೆಗೆ ಇಂಧನ (ನವೀಕರಿಸಬಹುದಾದ ಇಂಧನ ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಮತ್ತು ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಖಾತೆಗಳನ್ನೂ ನೋಡಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಪ್ರಮುಖ ಖಾತೆಗಳಲ್ಲಿ ಒಂದಾದ ಕಂದಾಯ ಪಡೆದುಕೊಂಡಿದ್ದಾರೆ. ಕಳೆದ ಮಹಾಯುತಿ ಸರ್ಕಾರದಲ್ಲಿ ಕಂದಾಯ ಇಲಾಖೆಯನ್ನು ನಿಭಾಯಿಸಿದ್ದ ಪ್ರಭಾವಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಈ ಬಾರಿ ಜಲಸಂಪನ್ಮೂಲ (ಗೋದಾವರಿ, ಕೃಷ್ಣಾ ಕಣಿವೆ ಇಲಾಖೆ) ನೀಡಲಾಗಿದೆ. ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಸಿಎಂ ಫಡ್ನವಿಸ್‌ ಅವರಿಗೆ ಆಪ್ತರಾಗಿರುವ ಬಿಜೆಪಿಯ ಗಿರೀಶ್ ಮಹಾಜನ್ ಅವರಿಗೆ ಜಲಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ಕೊಡಲಾಗಿದೆ. ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಗಣೇಶ್ ನಾಯಕ್ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ. ಶಿವಸೇನೆಯ ಗುಲಾಬ್ರಾವ್ ಪಾಟೀಲ್ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಮತ್ತು ಶಿವಸೇನೆಯ ಮತ್ತೊಬ್ಬ ಶಾಸಕ ದಾದಾಜಿ ಭೂಸೆ ಅವರಿಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ.

ಶಿವಸೇನೆಯ ಉದಯ್ ಸಾಮಂತ್ ಮೂರನೇ ಬಾರಿಗೆ ಕೈಗಾರಿಕೆ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂದೆ ಸರ್ಕಾರಗಳಲ್ಲಿ ಖಾತೆಯನ್ನೇ ಹೊಂದಿದ್ದರು.

ಬಿಜೆಪಿಯ ಪಂಕಜಾ ಮುಂಡೆ ಪರಿಸರ, ಹವಾಮಾನ ಬದಲಾವಣೆ ಮತ್ತು ಪಶುಸಂಗೋಪನೆ ಖಾತೆಗಳನ್ನು ಪಡೆದರೆ, ಅವರ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ ಖಾತೆಗಳು ದೊರೆತಿವೆ.

ಎನ್‌ಸಿಪಿಯ ಹಸನ್ ಮುಶ್ರಿಫ್ ಅವರು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಪಕ್ಷದ ಇನ್ನೊಬ್ಬ ಶಾಸಕ ಮಾಣಿಕ್ರಾವ್ ಕೊಕಾಟೆಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...