Homeಮುಖಪುಟಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

- Advertisement -
- Advertisement -

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರ್ಕಾರ ರಚನೆಯಾಗಿ ಬಹಳ ಸಮಯದ ನಂತರ ಕೊನೆಗೂ ಶನಿವಾರ (ಡಿ.21) ಖಾತೆ ಹಂಚಿಕೆಯಾಗಿದೆ.

ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದ ಏಕನಾಥ್ ಶಿಂದೆ ಅವರಿಗೆ ಇದೀಗ ಗೃಹ ಖಾತೆಯೂ ಕೈ ತಪ್ಪಿದ್ದು ನಿರಾಸೆಯಾಗಿದೆ. ಪ್ರಬಲ ಖಾತೆಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಯಶಸ್ವಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಯನ್ನು ಕೊಟ್ಟು ಸಮಾಧಾನ ಮಾಡಲಾಗಿದೆ. ಮತ್ತೊಬ್ಬರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಯೋಜನೆ ಮತ್ತು ಅಬಕಾರಿ ಖಾತೆ ನೀಡಲಾಗಿದೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರು ಗೃಹ ಖಾತೆಯ ಜೊತೆಗೆ ಇಂಧನ (ನವೀಕರಿಸಬಹುದಾದ ಇಂಧನ ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಮತ್ತು ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಖಾತೆಗಳನ್ನೂ ನೋಡಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಪ್ರಮುಖ ಖಾತೆಗಳಲ್ಲಿ ಒಂದಾದ ಕಂದಾಯ ಪಡೆದುಕೊಂಡಿದ್ದಾರೆ. ಕಳೆದ ಮಹಾಯುತಿ ಸರ್ಕಾರದಲ್ಲಿ ಕಂದಾಯ ಇಲಾಖೆಯನ್ನು ನಿಭಾಯಿಸಿದ್ದ ಪ್ರಭಾವಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಈ ಬಾರಿ ಜಲಸಂಪನ್ಮೂಲ (ಗೋದಾವರಿ, ಕೃಷ್ಣಾ ಕಣಿವೆ ಇಲಾಖೆ) ನೀಡಲಾಗಿದೆ. ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಸಿಎಂ ಫಡ್ನವಿಸ್‌ ಅವರಿಗೆ ಆಪ್ತರಾಗಿರುವ ಬಿಜೆಪಿಯ ಗಿರೀಶ್ ಮಹಾಜನ್ ಅವರಿಗೆ ಜಲಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ಕೊಡಲಾಗಿದೆ. ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಗಣೇಶ್ ನಾಯಕ್ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ. ಶಿವಸೇನೆಯ ಗುಲಾಬ್ರಾವ್ ಪಾಟೀಲ್ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಮತ್ತು ಶಿವಸೇನೆಯ ಮತ್ತೊಬ್ಬ ಶಾಸಕ ದಾದಾಜಿ ಭೂಸೆ ಅವರಿಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ.

ಶಿವಸೇನೆಯ ಉದಯ್ ಸಾಮಂತ್ ಮೂರನೇ ಬಾರಿಗೆ ಕೈಗಾರಿಕೆ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂದೆ ಸರ್ಕಾರಗಳಲ್ಲಿ ಖಾತೆಯನ್ನೇ ಹೊಂದಿದ್ದರು.

ಬಿಜೆಪಿಯ ಪಂಕಜಾ ಮುಂಡೆ ಪರಿಸರ, ಹವಾಮಾನ ಬದಲಾವಣೆ ಮತ್ತು ಪಶುಸಂಗೋಪನೆ ಖಾತೆಗಳನ್ನು ಪಡೆದರೆ, ಅವರ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ ಖಾತೆಗಳು ದೊರೆತಿವೆ.

ಎನ್‌ಸಿಪಿಯ ಹಸನ್ ಮುಶ್ರಿಫ್ ಅವರು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಪಕ್ಷದ ಇನ್ನೊಬ್ಬ ಶಾಸಕ ಮಾಣಿಕ್ರಾವ್ ಕೊಕಾಟೆಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...