Homeಮುಖಪುಟಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

ಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿರ್ಧಾರವು, ಬೇರ್ಪಟ್ಟ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರನ್ನು ಮರಾಠಿ ರಕ್ಷಣೆ ಮತ್ತು ‘ಮರಾಠಿ ಮನೂಸ್’ ಹಿತಾಸಕ್ತಿಗಳಿಗಾಗಿ ಒಗ್ಗೂಡಿಸಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥರಾಗಿರುವ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಭೇಟಿಯಾದ ನಂತರ ಬಿಜೆಪಿ ಸರ್ಕಾರದ ಕ್ರಮದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ವರದಿಗಳು ಉಲ್ಲೇಖಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಗುರಿಗಳನ್ನು ತಲುಪಲು ರಾಜ್ಯ ಸರ್ಕಾರ ನಿಜವಾಗಿಯೂ ಬದ್ಧವಾಗಿದ್ದರೆ, ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕ್ರೀಡೆ ಮತ್ತು ಕಲೆಗಳಂತಹ ವಿಷಯಗಳನ್ನು ಪರಿಚಯಿಸುವ ಬಗ್ಗೆ ಪರಿಗಣಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಜುಲೈ 6 ರಂದು ಗಿರ್ಗಾಮ್ ಚೌಪಟ್ಟಿಯಿಂದ ಪ್ರಾರಂಭವಾಗಿ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿರುವ ಮುಂಬರುವ ಮೆರವಣಿಗೆಯಲ್ಲಿ, ತಮ್ಮ ಸೋದರಸಂಬಂಧಿ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರನ್ನು ಸಂಪರ್ಕಿಸಲು ಉದ್ದೇಶಿಸಿರುವುದಾಗಿ ರಾಜ್ ಠಾಕ್ರೆ ಸುಳಿವು ನೀಡಿದ್ದಾರೆ.

“ವೈಯಕ್ತಿಕ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳಿಗಿಂತ ಹೆಚ್ಚಾಗಿ, ಮಹಾರಾಷ್ಟ್ರದ ವಿಚಾರ ಅತಿಮುಖ್ಯವಾಗಿದೆ. ಮರಾಠಿ ಮನೂಸ್ ನಮಗೆ ಮುಖ್ಯವಾಗಿದೆ” ಎಂದು ರಾಜ್ ಠಾಕ್ರೆ ಈ ಹಿಂದೆ ಹೇಳಿದ್ದರು.

ಉದ್ಧವ್ ಠಾಕ್ರೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಯಕರನ್ನು ಪ್ರತಿಭಟನೆಯಲ್ಲಿ ಭಾಗವಹಿಸಲು ವೈಯಕ್ತಿಕವಾಗಿ ಆಹ್ವಾನಿಸುವುದಾಗಿ ರಾಜ್ ಠಾಕ್ರೆ ಹೇಳಿದ್ದಾರೆ.

“ಇದು ನಮ್ಮ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿರುವ ಆಡಳಿತಾರೂಢ ಮಹಾಯುತಿ ಸರ್ಕಾರಕ್ಕೆ ಮಹಾರಾಷ್ಟ್ರ ಮತ್ತು ಮರಾಠಿ ಮನೂಸ್‌ನ ಶಕ್ತಿಯನ್ನು ತೋರಿಸುವ ವಿಚಾರವಾಗಿದೆ. ಮರಾಠಿ ಕಲಾವಿದರು ಮತ್ತು ಬರಹಗಾರರು ಪ್ರತಿಭಟನೆಯಲ್ಲಿ ಸೇರಲು ನಾವು ಮನವಿ ಮಾಡುತ್ತೇವೆ. ಜೊತೆಗೆ ಯಾರು ಭಾಗವಹಿಸುತ್ತಾರೆ ಮತ್ತು ಯಾರು ಭಾಗವಹಿಸುವುದಿಲ್ಲ ಎಂಬುದನ್ನು ನಾವು ಗಮನಿಸುತ್ತೇವೆ. ಅದು ನಮಗೆ ಸ್ಪಷ್ಟತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಜುಲೈ 6ರ ಪ್ರತಿಭಟನೆಗೆ ಭಾನುವಾರವನ್ನು ಆಯ್ಕೆ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ವಿವರಿಸಿದ ರಾಜ್‌ ಠಾಕ್ರೆ, ಪೋಷಕರು ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಆ ದಿನವನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಭಾನುವಾರ ರಜಾದಿನವಾಗಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮೆರವಣಿಗೆಯಲ್ಲಿ ಸೇರಲು ಸುಲಭವಾಗುತ್ತದೆ. ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ, ಆದರೆ ಮಹಾರಾಷ್ಟ್ರದಲ್ಲಿ, 1 ನೇ ತರಗತಿಯಿಂದ ಮರಾಠಿಯನ್ನು ಮಾತ್ರ ಕಲಿಸಬೇಕು. ನಾವು ಈ ನಿಲುವಿನ ಬಗ್ಗೆ ಸ್ಪಷ್ಟವಾಗಿದ್ದೇವೆ. ನಾನು ಶಿಕ್ಷಣ ಸಚಿವರಿಗೆ ಅದನ್ನೇ ತಿಳಿಸಿದ್ದೇನೆ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...