Homeಮುಖಪುಟಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

ಮಹಾರಾಷ್ಟ್ರ | ಹಿಂದಿ ಹೇರಿಕೆಯ ವಿರುದ್ಧ ಒಂದಾಗಲಿರುವ ರಾಜ್, ಉದ್ಧವ್ ಠಾಕ್ರೆ!

- Advertisement -
- Advertisement -

ಮಹಾರಾಷ್ಟ್ರದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ನಿರ್ಧಾರವು, ಬೇರ್ಪಟ್ಟ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಅವರನ್ನು ಮರಾಠಿ ರಕ್ಷಣೆ ಮತ್ತು ‘ಮರಾಠಿ ಮನೂಸ್’ ಹಿತಾಸಕ್ತಿಗಳಿಗಾಗಿ ಒಗ್ಗೂಡಿಸಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥರಾಗಿರುವ ರಾಜ್ ಠಾಕ್ರೆ ಅವರು ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರನ್ನು ಭೇಟಿಯಾದ ನಂತರ ಬಿಜೆಪಿ ಸರ್ಕಾರದ ಕ್ರಮದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ವರದಿಗಳು ಉಲ್ಲೇಖಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಗುರಿಗಳನ್ನು ತಲುಪಲು ರಾಜ್ಯ ಸರ್ಕಾರ ನಿಜವಾಗಿಯೂ ಬದ್ಧವಾಗಿದ್ದರೆ, ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕ್ರೀಡೆ ಮತ್ತು ಕಲೆಗಳಂತಹ ವಿಷಯಗಳನ್ನು ಪರಿಚಯಿಸುವ ಬಗ್ಗೆ ಪರಿಗಣಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಜುಲೈ 6 ರಂದು ಗಿರ್ಗಾಮ್ ಚೌಪಟ್ಟಿಯಿಂದ ಪ್ರಾರಂಭವಾಗಿ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿರುವ ಮುಂಬರುವ ಮೆರವಣಿಗೆಯಲ್ಲಿ, ತಮ್ಮ ಸೋದರಸಂಬಂಧಿ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರನ್ನು ಸಂಪರ್ಕಿಸಲು ಉದ್ದೇಶಿಸಿರುವುದಾಗಿ ರಾಜ್ ಠಾಕ್ರೆ ಸುಳಿವು ನೀಡಿದ್ದಾರೆ.

“ವೈಯಕ್ತಿಕ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳಿಗಿಂತ ಹೆಚ್ಚಾಗಿ, ಮಹಾರಾಷ್ಟ್ರದ ವಿಚಾರ ಅತಿಮುಖ್ಯವಾಗಿದೆ. ಮರಾಠಿ ಮನೂಸ್ ನಮಗೆ ಮುಖ್ಯವಾಗಿದೆ” ಎಂದು ರಾಜ್ ಠಾಕ್ರೆ ಈ ಹಿಂದೆ ಹೇಳಿದ್ದರು.

ಉದ್ಧವ್ ಠಾಕ್ರೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ನಾಯಕರನ್ನು ಪ್ರತಿಭಟನೆಯಲ್ಲಿ ಭಾಗವಹಿಸಲು ವೈಯಕ್ತಿಕವಾಗಿ ಆಹ್ವಾನಿಸುವುದಾಗಿ ರಾಜ್ ಠಾಕ್ರೆ ಹೇಳಿದ್ದಾರೆ.

“ಇದು ನಮ್ಮ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿರುವ ಆಡಳಿತಾರೂಢ ಮಹಾಯುತಿ ಸರ್ಕಾರಕ್ಕೆ ಮಹಾರಾಷ್ಟ್ರ ಮತ್ತು ಮರಾಠಿ ಮನೂಸ್‌ನ ಶಕ್ತಿಯನ್ನು ತೋರಿಸುವ ವಿಚಾರವಾಗಿದೆ. ಮರಾಠಿ ಕಲಾವಿದರು ಮತ್ತು ಬರಹಗಾರರು ಪ್ರತಿಭಟನೆಯಲ್ಲಿ ಸೇರಲು ನಾವು ಮನವಿ ಮಾಡುತ್ತೇವೆ. ಜೊತೆಗೆ ಯಾರು ಭಾಗವಹಿಸುತ್ತಾರೆ ಮತ್ತು ಯಾರು ಭಾಗವಹಿಸುವುದಿಲ್ಲ ಎಂಬುದನ್ನು ನಾವು ಗಮನಿಸುತ್ತೇವೆ. ಅದು ನಮಗೆ ಸ್ಪಷ್ಟತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಜುಲೈ 6ರ ಪ್ರತಿಭಟನೆಗೆ ಭಾನುವಾರವನ್ನು ಆಯ್ಕೆ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ವಿವರಿಸಿದ ರಾಜ್‌ ಠಾಕ್ರೆ, ಪೋಷಕರು ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಸುಗಮಗೊಳಿಸಲು ಆ ದಿನವನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

“ಭಾನುವಾರ ರಜಾದಿನವಾಗಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮೆರವಣಿಗೆಯಲ್ಲಿ ಸೇರಲು ಸುಲಭವಾಗುತ್ತದೆ. ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ, ಆದರೆ ಮಹಾರಾಷ್ಟ್ರದಲ್ಲಿ, 1 ನೇ ತರಗತಿಯಿಂದ ಮರಾಠಿಯನ್ನು ಮಾತ್ರ ಕಲಿಸಬೇಕು. ನಾವು ಈ ನಿಲುವಿನ ಬಗ್ಗೆ ಸ್ಪಷ್ಟವಾಗಿದ್ದೇವೆ. ನಾನು ಶಿಕ್ಷಣ ಸಚಿವರಿಗೆ ಅದನ್ನೇ ತಿಳಿಸಿದ್ದೇನೆ” ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ | ಹಿಂದಿ ಹೇರಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...