Homeಮುಖಪುಟಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

- Advertisement -
- Advertisement -

16 ವರ್ಷದ ಬಾಲಕಿಯ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರವೆಸಗಿರುವ ಘೋರ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂತ್ರಸ್ತ ಬಾಲಕಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಪ್ರಯತ್ನಿಸಿದಾಗ ಪೊಲೀಸ್‌‌ ಕೂಡಾ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಇದೀಗ ಸಂತ್ರಸ್ತ ಬಾಲಕಿ ಎರಡು ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಬಾಲಕಿಯು ಈ ವಾರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅತ್ಯಾಚಾರ ಮತ್ತು ಕಿರುಕುಳ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಬೀಡ್‌ನ ಪೊಲೀಸ್ ವರಿಷ್ಠಾಧಿಕಾರಿ ರಾಜಾ ರಾಮಸಾಮಿ ಭಾನುವಾರ ತಿಳಿಸಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆ ವಿವರ

ಸಂತ್ರಸ್ತೆಯ ಕುಟುಂಬ ಕೂಲಿ ಕೆಲಸ ಮಾಡುತ್ತಿದ್ದು, ಆಕೆಯ ತಾಯಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತಾಯಿಯ ಮರಣದ ನಂತರ, ತಂದೆಯು ಮಗಳ ಮದುವೆಯನ್ನು ಮಾಡಿದ್ದರು. ಆದರೆ, ಪತಿ ಮತ್ತು ಅತ್ತೆ-ಮಾವಂದಿರು ಬಾಲಕಿಯನ್ನು ನಿರಂತರವಾಗಿ ಥಳಿಸುತ್ತಾ, ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ನವೆಂಬರ್‌ 18 ವರೆಗೆ ‘ಭಾರಿ ಮಳೆ’: ಹವಾಮಾನ ಇಲಾಖೆ ಎಚ್ಚರಿಕೆ

ಪತಿಯ ಮನೆಯವರು ನೀಡಿರುವ ಕಿರುಕುಳದಿಂದ ಬೇಸತ್ತ ಬಾಲಕಿ ತಂದೆಯ ಬಳಿಗೆ ತೆರಳಿದ್ದರು. ಆದರೆ ತಂದೆ ಬಾಲಕಿಯನ್ನು ಮನೆಗೆ ಬಿಟ್ಟುಕೊಳ್ಳದೆ ಇದ್ದುದರಿಂದ ಅವರು ಬೀಡ್ ಜಿಲ್ಲೆಯ ಅಂಬೆಜೋಗೈ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದರು. ಈ ಸಮಯದಲ್ಲಿ ಅವರ ಮೇಲೆ ಲೈಂಗಿಕ ಶೋಷಣೆ ಪ್ರಾರಂಭವಾಗಿದೆ.

ಸಂತ್ರಸ್ತೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಲು ಅಂಬೆಜೋಗೈ ನಗರ ಪೊಲೀಸ್‌ ಠಾಣೆಗೆ ತೆರಳಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್‌‌ ತನ್ನನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಮಕ್ಕಳ ಕಲ್ಯಾಣ ಸಮಿತಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂತಿಮವಾಗಿ ಈ ವಾರ ಪೊಲೀಸರು ದೂರು ಪಡೆದು, ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಇದೀಗ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....