Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....