Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...