Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...