Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...