Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

ಬಿಲ್ಕಿಸ್ ಬಾನು ಪ್ರಕರಣ: ಆಶಾ ಭಾವನೆ ಮೂಡಿಸಿದ ಮಹಾರಾಷ್ಟ್ರದ ಕ್ಷಮಾದಾನ ನೀತಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಜೈಲಿನಿಂದ ಅವಧಿಪೂರ್ವ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಈ ಬೆನ್ನಲ್ಲೇ ಅಪರಾಧಿಗಳು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು, ಮಹಾರಾಷ್ಟ್ರದ ಹಿಂದುತ್ವವಾದಿ ಸರ್ಕಾರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಆತಂಕ ಸ್ವತಃ ಬಿಲ್ಕಿಸ್ ಬಾನು ಸೇರಿದಂತೆ ಬಹುತೇಕರಿಗೆ ಶುರುವಾಗಿದೆ. ಆದರೆ, ಮಹಾರಾಷ್ಟ್ರದ ಒಂದು ಕಾನೂನು ಈ ಆತಂಕವನ್ನು ದೂರ ಮಾಡುವ ಆಶಾ ಭಾವನೆ ಜೀವಪರರಲ್ಲಿ ಮೂಡಿಸಿದೆ.

ಬಿಲ್ಕಿಸ್ ಬಾನು ಪ್ರಕರಣ ಗುಜರಾತ್‌ನಲ್ಲಿ ನಡೆದಿದ್ದರೂ, ಸುಪ್ರೀಂ ಕೋರ್ಟ್‌ ಆದೇಶದಂತೆ ವಿಚಾರಣೆ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ನಡೆದಿತ್ತು. ಮಹಾರಾಷ್ಟ್ರದ ಗ್ರೇಟರ್ ಮುಂಬೈ ವಿಶೇಷ ನ್ಯಾಯಾಲಯ 2008ರ ಜನವರಿ 21ರಂದು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹಾಗಾಗಿ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಮಹಾರಾಷ್ಟ್ರ ಸರ್ಕಾರಕ್ಕಿದೆ. ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು ನಿಡುವಾಗಲೂ ಗುಜರಾತ್‌ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ ಎಂದಿರುವುದು ಕೂಡ ಇದೇ ವಿಚಾರಕ್ಕೆ.

ಆದರೆ, ಮುಂಬೈ ನ್ಯಾಯಾಲಯದ ತೀರ್ಪಿನ ಪ್ರಕಾರ 11 ಅಪರಾಧಿಗಳು ಕ್ಷಮಾದಾನ ಪಡೆಯುವ ಮೊದಲು ಕನಿಷ್ಠ 18 ವರ್ಷ ಶಿಕ್ಷೆ ಅನುಭವಿಸಿರಬೇಕು. ಇದರರ್ಥ ಎಲ್ಲಾ ಹನ್ನೊಂದು ಅಪರಾಧಿಗಳು 2026ರಲ್ಲಿ ಮಾತ್ರ ಕ್ಷಮಾದಾನ ಪಡೆಯಲು ಅರ್ಹರಾಗಿರುತ್ತಾರೆ. ಅಲ್ಲದೆ ಅತೀವ ಹಿಂಸೆಗೆ ತುತ್ತಾದ ಮಹಿಳೆಯರ ಪ್ರಕರಣಗಳನ್ನು 2008ರ ಮಹಾರಾಷ್ಟ್ರ ಕ್ಷಮಾದಾನ ನೀತಿ ಪ್ರತ್ಯೇಕವಾಗಿ ಗುರುತಿಸಿದ್ದು, ಇದರ ಅಡಿಯಲ್ಲಿ ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ. ಈ ನಿಯಮ ಪ್ರಕರಣದ 11 ಅಪರಾಧಿಗಳಿಗೆ ಅನ್ವಯವಾಗುವ ಸಾಧ್ಯತೆಯಿದ್ದು, ಕನಿಷ್ಠ ಇನ್ನೂ 12 ವರ್ಷಗಳ ಕಾಲ ಅಂದರೆ 2036ರವರೆಗೆ ಅವರು ಸೆರೆವಾಸ ಅನುಭವಿಸಬೇಕಾಗಬಹುದು. 2008ರ ನೀತಿಗೆ ಮೊದಲು, ಮಹಾರಾಷ್ಟ್ರದಲ್ಲಿ 1992ರ ನೀತಿಯಡಿ ಕ್ಷಮಾದಾನ ನೀಡಲಾಗುತ್ತಿತ್ತು.

ಅಪರಾಧಿಗಳು 28 ವರ್ಷಗಳ ಶಿಕ್ಷೆ ಅನುಭವಿಸಿದ ನಂತರವಷ್ಟೇ ಕ್ಷಮಾದಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಮಹಾರಾಷ್ಟ್ರದ 2008ರ ಕ್ಷಮಾದಾನ ನೀತಿ ಬಿಲ್ಕಿಸ್ ಬಾನು ಮತ್ತು ಆಕೆಯನ್ನು ಬೆಂಬಲಿಸುವ ಮನುಷ್ಯರಲ್ಲಿ ಆಶಾಭಾವನೆ ಮೂಡಿಸಿದೆ. ಆದರೂ, ಈಗ ಅತೀವ ಸಂತಸಪಡುವಂತಿಲ್ಲ.

ಮುಂದೆ ನಡೆಯಬೇಕಾಗಿರುವುದು ಅಪರಾಧಿಗಳು ಸುಪ್ರೀಂ ಕೋರ್ಟ್‌ ಆದೇಶದಂತೆ ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು. ಒಂದು ವೇಳೆ ಅವರು ತಪ್ಪಿಸಿಕೊಂಡರೆ ಪೊಲೀಸರು ಬಂಧಿಸಿ ಕರೆ ತರಲಿದ್ದಾರೆ. ಜೈಲು ಸೇರುವ ಮುನ್ನ ಅಥವಾ ನಂತರ ಅವರು ಕ್ಷಮಾದಾನ ಕೋರಿ ಮಹಾರಾಷ್ಟ್ರ ಸರ್ಕಾರದ ಮೊರೆ ಹೋಗಬಹುದು. ಮಹಾರಾಷ್ಟ್ರ ಸರ್ಕಾರ ಅವರನ್ನು ಬಿಡುಗಡೆ ಮಾಡಿದರೆ, ಬಿಲ್ಕಿಸ್ ಬಾನು ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿ ಬಿಡುಗಡೆ ಪ್ರಶ್ನಿಸುವ ಸಾಧ್ಯತೆ ಇದೆ. ಬಳಿಕ ಪ್ರಕರಣ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ.

ಒಂದು ವೇಳೆ ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮನವಿ ತಳ್ಳಿ ಹಾಕಿದರೆ, ಅತ್ಯಾಚಾರಿಗಳು ತಮ್ಮ ಶಿಕ್ಷೆಯ ಅವಧಿ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕಾಗುತ್ತದೆ. ಇದರಿಂದ ಒಂದು ಹಂತದಲ್ಲಿ ಬಿಲ್ಕಿಸ್ ಬಾನು ಹೋರಾಟಕ್ಕೆ ಜಯ ಸಿಕ್ಕಿದಂತಾಗುತ್ತದೆ.

ಗುಜರಾತ್‌ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್‌ ಅಸಮಧಾನ

ನಿನ್ನೆ ಪ್ರಕಟವಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಅಧಿಕಾರ ಕಸಿದುಕೊಂಡಿದ್ದು ಸರಿಯಲ್ಲ. ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮನವಿಯನ್ನು ನಿರ್ಧರಿಸಲು ಗುಜರಾತ್‌ ಸಮರ್ಥವಾಗಿದೆ ಎಂದು ಘೋಷಿಸಿದ ಮೇ 2022ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗುಜರಾತ್ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿತ್ತು. ಸಿಆರ್‌ಪಿಸಿ 437ನೇ ಸೆಕ್ಷನ್‌ ಪ್ರಕಾರ ಮಹಾರಾಷ್ಟ್ರವೇ ಸೂಕ್ತ ಸರ್ಕಾರ ಎಂದು ಗುಜರಾತ್ ಈ ಹಿಂದೆ ಸರಿಯಾಗಿ ವಾದಿಸಿತ್ತು. ಆದರೆ ಅದನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದಾಗ ಗುಜರಾತ್ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದಿತ್ತು. ಮೇ 13, 2022ರ ತೀರ್ಪನ್ನು ತಿದ್ದುಪಡಿ ಮಾಡುವಂತೆ ಕೋರಿ ಗುಜರಾತ್ ಸರ್ಕಾರ ಏಕೆ ಮರುಪರಿಶೀಲನೆ ಸಲ್ಲಿಸಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಈ ಪ್ರಕರಣದಲ್ಲಿ ಬಿಡುಗಡೆ ಎಂಬುದು ಅಧಿಕಾರ ಮತ್ತು ನ್ಯಾಯವ್ಯಾಪ್ತಿಯಿಲ್ಲದ ಆದೇಶಗಳಿಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.

ಅತ್ಯಾಚಾರಿಗಳು ಕನಿಷ್ಠ 28 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು

ಅಪರಾಧಿಗಳ ಬಿಡುಗಡೆಗೆ ಯಾವ ನೀತಿ ಅನ್ವಯಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯ ಕೊರತೆಯಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಧೀಶರು 2008ರ ನೀತಿ ಅನ್ವಯಿಸಿದ್ದರು. ಮತ್ತೊಂದೆಡೆ 1992ರ ನೀತಿ ಅನ್ವಯಿಸಿದರೂ ಕೂಡ, ಲೈಂಗಿಕ ವಿಷಯಗಳಿಗೆ ಸಂಬಂಧಿಸಿದ ಕೊಲೆಗಳಿಗಾಗಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವವರ ಪ್ರಕರಣಗಳಲ್ಲಿ ಕನಿಷ್ಠ 22 ವರ್ಷಗಳನ್ನು ಪೂರೈಸಿದ ನಂತರವೇ ವಿನಾಯಿತಿ ದೊರೆಯಲಿದ್ದು, ಅಸಾಧಾರಣ ಹಿಂಸಾಚಾರ ಅಥವಾ ವಿಕೃತತೆಯನ್ನು ಒಳಗೊಂಡಿದ್ದರೆ ಕನಿಷ್ಠ ಶಿಕ್ಷೆಯ ಅವಧಿ 28 ವರ್ಷಗಳಾಗುತ್ತವೆ. ಈ ನೀತಿ ಅನ್ವಯ ಪ್ರಕರಣದ ಅಪರಾಧಿಗಳು 2030 ಅಥವಾ 2036ರ ನಂತರವಷ್ಟೇ ಬಿಡುಗಡೆಗೆ ಅರ್ಹರಾಗುತ್ತಾರೆ.

ಸುಪ್ರೀಂ ತೀರ್ಪಿನ ಬಗ್ಗೆ ಯಾರು ಏನಂದ್ರು?

“ನಾನು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ. ಆದರೆ, ನ್ಯಾಯಾಲಯ ತೀರ್ಪು ನೀಡುವಾಗ, ಗುಜರಾತ್ ಸರ್ಕಾರ ತನ್ನೆಲ್ಲ ಮಿತಿಗಳನ್ನು ಮೀರಿ, ಅನ್ಯಾಯದ ಮಾರ್ಗದ ಮೂಲಕ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ. ಇದು ನನಗೆ ಆಘಾತವನ್ನು ಉಂಟು ಮಾಡಿದೆ. ಅತ್ಯಂತ ಕ್ರೂರ ಕೃತ್ಯ ಎಸಗಿದವರನ್ನು ರಕ್ಷಣೆ ಮಾಡುವ ದರ್ದು ಗುಜರಾತ್ ಸರ್ಕಾರಕ್ಕೆ ಯಾಕಿದೆ? ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ಯಾಕಿಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಅಪರಾಧಿಗಳು ಮಹಾರಾಷ್ಟ್ರ ಸರ್ಕಾರದ ಮೊರೆ ಹೋದರೆ ನಾವು ಹೋರಾಟ ಮುಂದುವರಿಸುತ್ತೇವೆ. ಬಿಲ್ಕಿಸ್ ಮೇಲೆ ದೌರ್ಜನ್ಯ ನಡೆದ ಕೆಲ ದಿನಗಳಲ್ಲೇ ನಾನು ಆಕೆಯನ್ನು ಭೇಟಿಯಾಗಿದ್ದೆ. ಅವತ್ತು ಆಕೆಯ ಮುಖದಲ್ಲಿದ್ದ ನೋವು, ಇವತ್ತಿಗೂ ನನ್ನ ಕಣ್ಣ ಮುಂದೆ ಬರುತ್ತಿದೆ” ಎಂದು ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಾಮಾಜಿಕ ಹೋರಾಟಗಾರ್ತಿ ಸುಭಾಶಿನಿ ಅಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಬೆನ್ನಲ್ಲೇ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ ಮಹಿಳಾ ಹಕ್ಕುಗಳ ವಕೀಲೆ ಆಭಾ ಸಿಂಗ್, “ಬಿಲ್ಕಿಸ್ ಬಾನುಗೆ ನ್ಯಾಯ ದೊರೆತಿದೆ, ಆಕೆಗೆ ನ್ಯಾಯ ದೊರಕಿಸಿ ಕೊಡಲಾಗಿದೆ. ಇದೊಂದು ದೊಡ್ಡ ಜಯ. ಒಳ್ಳೆಯದನ್ನು ಯೋಚನೆ ಮಾಡುವ ಎಲ್ಲಾ ಮನುಷ್ಯರಿಗೆ ಸಿಕ್ಕ ಜಯ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತೊಬ್ಬರು ವಕೀಲೆ ಫ್ಲಾವಿಯ ಇಗ್ನಿಸ್ ಮಾತನಾಡಿ, ನಾನು ತೀರ್ಪು ಸ್ವಾಗತಿಸುತ್ತೇನೆ. ಇದೊಂದು ಅತ್ಯದ್ಭುತ ತೀರ್ಪ. ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಾಗ ಹೂಮಾಲೆ ಹಾಕಿ ಸ್ವಾಗತಿಸುವ ಮೂಲಕ, ನ್ಯಾಯ ನಿರೀಕ್ಷೆ ಮಾಡುವ ಸರ್ವರಿಗೂ ಅವಮಾನ ಮಾಡಲಾಗಿತ್ತು. ಸುಪ್ರೀಂ ಕೋರ್ಟ್‌ ಒಳ್ಳೆಯ ತೀರ್ಪಿನ ಮೂಲಕ ನಮನ್ನು ನಿರಾಳವಾಗಿಸಿದೆ ಎಂದಿದ್ದಾರೆ.

ಹಿರಿಯ ವಕೀಲೆ ವೃಂದಾ ಗ್ರೋವರ್ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಗುಜರಾತ್ ಸರ್ಕಾರ ತಪ್ಪಾದ ರೀತಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಗುಜರಾತ್ ಸರ್ಕಾರಕ್ಕೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರ ಇಲ್ಲ. ಆದರೂ, ಸರ್ಕಾರ ಮಿತಿಗಳನ್ನು ಮೀರಿ ಅಪರಾಧಿಗಳನ್ನು ರಕ್ಷಿಸುವ ಪ್ರಯತ್ನ ಮಾಡಿದೆ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ ಎಂದಿದ್ದಾರೆ.

ಇದನ್ನೂ ಓದಿ : ಸುಪ್ರೀಂ ತೀರ್ಪಿನ ಬೆನ್ನಲ್ಲೇ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನೆಗಳಿಗೆ ಬೀಗ: ತಲೆ ಮರೆಸಿಕೊಂಡ್ರಾ ಅಪರಾಧಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...