Homeಮುಖಪುಟಮಹಾರಾಷ್ಟ್ರ | ಸರ್‌ಪಂಚ್ ಹತ್ಯೆ ಪ್ರಕರಣ : ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮಹಾರಾಷ್ಟ್ರ | ಸರ್‌ಪಂಚ್ ಹತ್ಯೆ ಪ್ರಕರಣ : ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

- Advertisement -
- Advertisement -

ಬೀಡ್‌ ಜಿಲ್ಲೆಯ ಸರ್‌ಪಂಚ್ (ಗ್ರಾಮದ ಮುಖ್ಯಸ್ಥ) ಸಂತೋಷ್ ದೇಶಮುಖ್ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ವಾಲ್ಮೀಕ್ ಕರಡ್ ಅವರನ್ನು ಆರೋಪಿಯನ್ನಾಗಿ ಹೆಸರಿಸಿದ ನಂತರ, ಸಚಿವ ಧನಂಜಯ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ (ಮಾ.4) ತಿಳಿಸಿದ್ದಾರೆ.

“ಸಚಿವ ಧನಂಜಯ ಮುಂಡೆ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಮುಂದಿನ ಕ್ರಮಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ” ಎಂದು ಸಿಎಂ ಫಡ್ನವೀಸ್ ಹೇಳಿದ್ದಾರೆ.

ಸಚಿವ ಸ್ಥಾನ ತೊರೆಯುವಂತೆ ಮುಂಡೆ ಅವರಿಗೆ ಸಿಎಂ ಫಡ್ನವಿಸ್ ಸೂಚಿಸಿದ್ದಾರೆ ಎಂದು ಫಡ್ನವೀಸ್ ಅವರ ಆಪ್ತ ಮೂಲಗಳು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿತ್ತು. ಈ ಬೆನ್ನಲ್ಲೇ ಮುಂಡೆ ರಾಜೀನಾಮೆ ನೀಡಿದ್ದಾಗಿ ಸಿಎಂ ಘೋಷಿಸಿದ್ದಾರೆ.

ಸರ್‌ಪಂಚ್ ದೇಶಮುಖ್ ಹತ್ಯೆ ಪ್ರಕರಣದ ಆರೋಪಪಟ್ಟಿಯನ್ನು ಸಿಐಡಿ ಸಲ್ಲಿಸಿದೆ ಮತ್ತು ಅದರಲ್ಲಿ ಧನಂಜಯ ಮುಂಡೆ ಆಪ್ತ ಸಹಾಯಕ ವಾಲ್ಮೀಕ್ ಕರಡ್ ಅವರನ್ನು ಮೊದಲ ಆರೋಪಿಯಾಗಿ ಹೆಸರಿಸಲಾಗಿದೆ. ಈ ಸಂಬಂಧ ಚರ್ಚಿಸಲು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ (ಮಾ.3) ರಾತ್ರಿ ಸಿಎಂ ಫಡ್ನವೀಸ್ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ಧನಂಜಯ ಮುಂಡೆ, ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಾರ್ಲಿ ವಿಧಾನಸಭಾ ಕ್ಷೇತ್ರದ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕರಾಗಿದ್ದಾರೆ. ಅವರು ಈ ಹಿಂದೆ ಬೀಡ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.

ಪ್ರಸ್ತುತ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಪುಣೆ ಜೊತೆಗೆ ಬೀಡ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಬೀಡ್‌ ಜಿಲ್ಲೆಯ ಮಸಜೋಗ್ ಗ್ರಾಮದ ಸರ್‌ಪಂಚ್ ಸಂತೋಷ್ ದೇಶಮುಖ್ ಅವರನ್ನು ಕಳೆದ ವರ್ಷ (2024) ಡಿಸೆಂಬರ್ 9 ರಂದು ಜಿಲ್ಲೆಯ ಇಂಧನ ಕಂಪನಿಯನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.

ದೇಶಮುಖ್ ಹತ್ಯೆ ಮತ್ತು ಅದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಫೆಬ್ರವರಿ 27, 2025ರಂದು ಬೀಡ್ ಜಿಲ್ಲಾ ನ್ಯಾಯಾಲಯಕ್ಕೆ 1,200 ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ.

ಸರ್‌ಪಂಚ್ ಕೊಲೆ, ಅವಾದಾ ಇಂಧನ ಕಂಪನಿಯಿಂದ ಹಣ ಸುಲಿಗೆ ಮಾಡಲು ಪ್ರಯತ್ನ ಮತ್ತು ಕಂಪನಿಯ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಸೇರಿ ಬೀಡ್‌ನ ಕೇಜ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೋಕಾ) ಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಈವರೆಗೆ ಏಳು ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಮೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...