Homeಮುಖಪುಟಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

ಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಪರ್ಯಾಯವನ್ನು ನೀಡುವ ನಿಟ್ಟಿನಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ಕೆಲಸ ಮಾಡಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಮಹಾರಾಷ್ಟ್ರ

ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತಮ್ಮ ಸಾರ್ವಜನಿಕ ಸಭೆಗಳಿಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಜಾತಿ ಗಣತಿ ನಡೆಯಬೇಕು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಂವಿಎ ಮೈತ್ರಿಯಲ್ಲಿ ಪ್ರಮುಖವಾಗಿ ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಪಕ್ಷಗಳು ಇವೆ. ಬುಧವಾರ ನಾಗ್ಪುರಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಜಾತಿ ಆಧಾರಿತ ಜನಗಣತಿ ನಡೆಯಲಿದೆ ಎಂದು ಹೇಳಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷವು “50%” ಮೀಸಲಾತಿ ಮಿತಿಯನ್ನು ಮೀರಿ ಮೀಸಲಾತಿ ನೀಡಲಿದೆ ಎಂದು ಭರವಸೆ ನೀಡಿದ್ದರು. ಮಹಾರಾಷ್ಟ್ರ

ತಮ್ಮ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಶರದ್ ಪವಾರ್, “ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಅವರಿಗೆ ವಿಶ್ವಾಸವನ್ನು ನೀಡುವಲ್ಲಿ ನಾವು ಕೆಲಸ ಮಾಡಬೇಕಾಗಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿ ನಾನು ಮತ್ತು ನನ್ನ ಎಲ್ಲಾ ಸಹಚರರು ಇಂದಿನಿಂದ ಮಹಾರಾಷ್ಟ್ರದಾದ್ಯಂತ ಜನರನ್ನು ತಲುಪುತ್ತಿದ್ದೇವೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, “ನನ್ನ ಪಕ್ಷದ ನಿಲುವನ್ನು ನಾನು ಹೇಳುತ್ತೇನೆ. ನಾವು ಕಳೆದ ಮೂರು ವರ್ಷಗಳಿಂದ ಜಾತಿ ಗಣತಿಗೆ ಒತ್ತಾಯಿಸುತ್ತಿದ್ದೇವೆ. ಜಾತಿ ಗಣತಿ ನಡೆಸಬೇಕು, ಅದು ದೇಶದ ಮುಂದೆ ನಿಜವಾದ ಸಮಸ್ಯೆಗಳನ್ನು ಇಡುತ್ತದೆ” ಎಂದು ಹೇಳಿದ್ದಾರೆ.

“ಪ್ರಮುಖವಾಗಿ, ಮೀಸಲಾತಿ ಮಿತಿಯನ್ನು ಹೆಚ್ಚಿಸುವ ನಿರ್ಧಾರವನ್ನು ಸುಲಭಗೊಳಿಸಲು ಜಾತಿ ಗಣತಿ ಸಹಾಯ ಮಾಡುತ್ತದೆ ಎಂದು ತೋರುತ್ತದೆ. ಜನಗಣತಿ ಪೂರ್ಣಗೊಂಡ ನಂತರ ಈ ಚಿತ್ರಣವು ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ, ರಾಹುಲ್ ಗಾಂಧಿ ಹೇಳುವಂತೆ ನಡೆದರೆ ಮೀಸಲಾತಿ ಶೇಕಡಾವಾರು ಹೆಚ್ಚಿಸಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...