Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...