Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...