Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...