Homeಮುಖಪುಟಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

ಮಹಾರಾಷ್ಟ್ರ | ‘ಶ್ಯಾಡೋ’ ಜಾಹೀರಾತುಗಳಿಗಾಗಿ ₹3.32 ಕೋಟಿ ಖರ್ಚು ಮಾಡಿದ ಮಹಾಯುತಿ

- Advertisement -
- Advertisement -

ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮುಂಚೆ ರಾಜ್ಯದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಒಕ್ಕೂಟಕ್ಕಿಂತ ಸುಮಾರು ಏಳು ಪಟ್ಟು ಹೆಚ್ಚು ಹಣವನ್ನು ಸಾಮಾಜಿಕ ಮಾಧ್ಯಮದ ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ (Shadow Account) ಮೂಲಕ ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿಯೊಂದು ಹೇಳಿದೆ. ಮಹಾರಾಷ್ಟ್ರ

ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಗಳು ಇದ್ದರೆ, ಪ್ರತಿಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿಯಲ್ಲಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಇವೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

“ಮಹಾರಾಷ್ಟ್ರಾಸ್ ಶ್ಯಾಡೋ ಪಾಲಿಟಿಕ್ಸ್‌: ಹೌ ಮೆಟಾ ಪರ್ಮಿಟ್ಸ್, ಪ್ರಾಫಿಟ್ಸ್ ಫ್ರಂ ಆಂಡ್ ಪ್ರಮೋಟ್ ಶ್ಯಾಡೋ ಪೊಲಿಟಿಕಲ್ ಅಡ್ವಟೈಸ್‌ಮೆಂಟ್” ಎಂಬ ಶೀರ್ಷಿಕೆಯ ವರದಿಯನ್ನು ಟೆಕ್ ಜಸ್ಟಿಸ್ ಲಾ ಪ್ರಾಜೆಕ್ಟ್, ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್, ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್, ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದಲಿತ ಐಕ್ಯತಾ ವೇದಿಕೆ ಜಂಟಿಯಾಗಿ ಪ್ರಕಟಿಸಿದೆ.

ಮಹಾಯುತಿ ಮೈತ್ರಿಕೂಟವು ತಮ್ಮ ಅಧೀಕೃತ ಅಲ್ಲದ ಬೆಂಬಲಿಗ ಖಾತೆಗಳ ಮೂಲಕ ಜಾಹೀರಾತಿಗಾಗಿ 3.32 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯು ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ 50.47 ಲಕ್ಷ ರೂಪಾಯಿಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ ಎಂದು ವರದಿ ಉಲ್ಲೇಖಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿನ ಜಾಹೀರಾತುಗಳು ಸೇರಿದಂತೆ ಎಲ್ಲಾ ಬೆಂಬಲಿಗ ರಾಜಕೀಯ ಜಾಹೀರಾತುಗಳು ಮತದಾನದ ಅವಧಿಯಲ್ಲಿ ಚುನಾವಣಾ ಆಯೋಗದಿಂದ ಪೂರ್ವ ಪ್ರಮಾಣೀಕರಣದ ಅಗತ್ಯವಿದೆ ಎಂದು ವರದಿಯು ಉಲ್ಲೇಖಿಸಿದೆ.

ಆಡಳಿತರೂಢ ಮಹಾಯುತಿ ಮೈತ್ರಿಯು ಕನಿಷ್ಠ ಐವತ್ತಾರು ಪೇಜ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಸುತ್ತದೆ ಎಂದು ವರದಿ ಹೇಳಿದೆ. ಆದರೆ ಮಹಾ ವಿಕಾಸ್ ಅಘಾಡಿ ಕೇಲವ ನಾಲ್ಕು ಪೇಜ್‌ಗಳನ್ನು ನಡೆಸುತ್ತಿವೆ ಎಂದು ತಿಳಿಸಿದೆ. ಆಡಳಿತಾರೂಢ ಮಹಾಯುತಿ ಒಕ್ಕೂಟವು ತನ್ನ ಬೆಂಬಲಿಗ ಖಾತೆಗಳ ಮೂಲಕ ಸುಮಾರು 33,000 ಜಾಹೀರಾತುಗಳನ್ನು ಹಾಕಿದ್ದರೆ, ವಿಪಕ್ಷಗಳು ಮೈತ್ರಿಗೆ ಸಂಬಂಧಿಸಿದ ಪುಟಗಳಲ್ಲಿ ಆಗಸ್ಟ್ 5 ಮತ್ತು ನವೆಂಬರ್ 2 ರ ನಡುವೆ ಕೇವಲ 1,000 ಕ್ಕಿಂತ ಕಡಿಮೆ ಜಾಹೀರಾತುಗಳನ್ನು ನೀಡಿವೆ ಎಂದು ವರದಿ ಹೇಳಿದೆ.

ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 2.61 ಕೋಟಿ ರೂ. ಜಾಹಿರಾತಿಗಾಗಿ ಖರ್ಚು ಮಾಡಿದ್ದರೆ, ಶಿಂಧೆ ನೇತೃತ್ವದ ಶಿವಸೇನೆ 56.92 ಲಕ್ಷ ರೂ. ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ 35.86 ಲಕ್ಷ ರೂ.ಗಳನ್ನು ಜಾಹಿರಾತಿಗಾಗಿ ಖರ್ಚು ಮಾಡಿದೆ.

“ಬಿಜೆಪಿಯು ಒಂದೊಂದು ವಿಭಿನ್ನ ಥೀಮ್‌ನೊಂದಿಗೆ ಹಲವು ಬೆಂಬಲಿಗ ಖಾತೆಗಳನ್ನು ನಡೆಸುತ್ತಿದೆ” ಎಂದು ವರದಿ ಹೇಳಿದೆ.

“ಬಿಜೆಪಿಯ ಬೆಂಬಲಿಗ ಪುಟಗಳ ಮೂಲಕ ಹರಿಬಿಡಲಾದ ವಿಷಯವು ಇತರರಿಗಿಂತ ಭಿನ್ನವಾಗಿದ್ದು, ಅದು ಬಹಿರಂಗವಾಗಿ ಇಸ್ಲಾಮೋಫೋಬಿಕ್, ಭಯ ಹುಟ್ಟಿಸುವ ಮತ್ತು ದ್ವೇಷದ ಮಾತುಗಳಿಂದ ತುಂಬಿರುವ ಜಾಹಿರಾತುಗಳಿಂದ ತುಂಬಿದೆ. ಈ ಜಾಹೀರಾತುಗಳು ಮೆಟಾದ ನೀತಿಗಳನ್ನು ಉಲ್ಲಂಘಿಸುತ್ತಿವೆ ಎಂಬುದಕ್ಕೆ ಹಲವು ಪುರಾವೆಗಳ ಹೊರತಾಗಿಯೂ, ಮೆಟಾ ಅವುಗಳನ್ನು ತೆಗೆದುಹಾಕುವುದಿಲ್ಲ. ಜೊತೆಗೆ ಅಧಿಕೃತ ಜಾಹೀರಾತು ಪುಟಗಳಿಗಿಂತ ಹೆಚ್ಚಾಗಿ ಇದನ್ನು ಪ್ರಚಾರ ಮಾಡುತ್ತದೆ” ಎಂದು ವರದಿ ಹೇಳಿದೆ.

ಬಿಜೆಪಿಯ ಬೆಂಬಲಿಗ ಖಾತೆಗಳು ದ್ವೇಷಪೂರಿತ ಮತ್ತು ಕೋಮು ವಿಭಜಕ ವಿಷಯವನ್ನು ಮುಂದಿಡುತ್ತಿವೆ ಎಂದು ವರದಿ ಹೇಳಿದೆ.

“ಬಿಜೆಪಿಯ ಅಧಿಕೃತ ಪುಟವು ಪ್ರಾಥಮಿಕವಾಗಿ ಅಭಿವೃದ್ಧಿ ಮತ್ತು ಕೃಷಿಯ ಮೇಲೆ ಜಾಹೀರಾತುಗಳನ್ನು ಪ್ರಕಟಿಸುತ್ತದೆ. ಇದರಲ್ಲಿ ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪುಟಗಳು ಹೇಳಿರುವ ವಿಷಯಗಳಿಗೆ ನಿಕಟ ಹೋಲಿಕೆಯನ್ನು ಹೊಂದಿರುತ್ತದೆ. ಆದರೆ, ಅವರ ಬೆಂಬಲಿಗ ಬಿಜೆಪಿ ಖಾತೆಗಳ ಜಾಲವು ಪ್ರಧಾನವಾಗಿ ಜಾತಿ ಕೋಟಾದ ಸುತ್ತ ನಿರೂಪಣೆಗಳನ್ನು ಹುಟ್ಟುಹಾಕುತ್ತದೆ. ವಿಪಕ್ಷಗಳು ಮರಾಠರ ಹಕ್ಕುಗಳನ್ನು ಎತ್ತಿಹಿಡಿಯುತ್ತಿಲ್ಲ ಎಂದು ದಾಳಿ ಮಾಡಲು ಅದನ್ನು ಬಳಸುತ್ತದೆ.” ಎಂದು ವರದಿ ಉಲ್ಲೇಖಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಮಹಾ ವಿಕಾಸ್ ಅಘಾಡಿ ನಡೆಸುತ್ತಿರುವ ಬೆಂಬಲಿಗ ಪುಟಗಳಲ್ಲಿ ಯಾವುದೇ ದ್ವೇಷ ಭಾಷಣ ಅಥವಾ ಕೋಮುವಾದದ ವಿಷಯಗಳು ಹೊಂದಿರುವುದಿಲ್ಲ ಎಂದು ಅದು ಹೇಳಿಕೊಂಡಿದೆ.

ಬಿಜೆಪಿಯ ಬೆಂಬಲಿಗ ಪುಟಗಳು ಬಿಜೆಪಿಯ ಅಧಿಕೃತ ಪುಟಕ್ಕಿಂತ ಹತ್ತು ಪಟ್ಟು ಹೆಚ್ಚಿನ ಕಾಮೆಂಟ್‌ಗಳನ್ನು ಪಡೆಯುತ್ತವೆ ಎಂದು ವರದಿ ಹೇಳಿದೆ. “ಇಂತದ್ದೆ ರಾಜಕೀಯ ಪಕ್ಷಗಳ ಪುಟ ಎಂದು ತಿಳಿಯದಂತೆ ರಾಜಕೀಯವಾಗಿ ಸೂಕ್ಷ್ಮ ವಿಷಯವನ್ನು ಪ್ರಸಾರ ಮಾಡಲು ಇಂತಹ ಬೆಂಬಲಿಗ ಖಾತೆಗಳನ್ನು ಬಳಸಲಾಗುತ್ತದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಧ್ಯಪ್ರದೇಶ: ಚುನಾವಣೋತ್ತರ ಹಿಂಸಾಚಾರದಲ್ಲಿ ದಲಿತರ ಗ್ರಾಮಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...