Homeಮುಖಪುಟಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ...

ಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ ದಾಖಲು

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ ಮಹಾರಾಷ್ಟ್ರದ ಬಿಜೆಪಿ ಶಾಸಕರಾದ ನಿತೇಶ್ ರಾಣೆ ಮತ್ತು ಅವರ ಸಹೋದರರಾದ ನಿಲೇಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ ನಿತೇಶ್ ರಾಣೆ, “ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿಯ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದ್ದರೂ ಶರದ್ ಪವಾರ್ ಏಕೆ ಅವರ ರಾಜೀನಾಮೆ ಕೇಳಿಲ್ಲ” ಎಂದು ಪ್ರಶ್ನಿಸಿದ್ದರು. ಮುಂದುವರೆದು ಶರದ್ ಪವಾರ್ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂಗೆ ಸಹ ಸಹಾಯ ಮಾಡುತ್ತಾರೆ ಎಂದು ಆರೋಪಿಸಿದ್ದರು.

ಶರದ್ ಪವಾರ್‌ರವರು ನವಾಬ್ ಮಲಿಕ್ ರಾಜೀನಾಮೆ ಏಕೆ ಪಡೆದಿಲ್ಲ? ಶರದ್ ಪವಾರ್ ಮತ್ತು ದಾವೂದ್ ಇಬ್ರಾಹಿಂ ನಡುವೆ ಸಂಬಂಧವಿದೆಯೆ? ಶರದ್ ಪವಾರ್ ದಾವೂದ್ ಇಬ್ರಾಹಿಂ ಪರ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ನನಗೆ ಸಂದೇಹವಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಶರದ್ ಪವಾರ್ ಜಿ ಅವರಿಗೆ ದಾವೂದ್ ಇಬ್ರಾಹಿಂ ಬಗ್ಗೆ ತುಂಬಾ ಪ್ರೀತಿ ಇದ್ದರೆ, ಅವರು ತಮ್ಮ ಕ್ಯಾಬಿನ್‌ನಿಂದ ಗಾಂಧೀಜಿ ಫೋಟೋ ತೆಗೆದು ದಾವೂದ್ ಇಬ್ರಾಹಿಂ ಫೋಟೊ ಹಾಕಿಕೊಳ್ಳಲಿ. ನಾವು ಈ ಸರ್ಕಾರವನ್ನು ಬಯಲಿಗೆಳೆದುದ್ದಕ್ಕೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ನಿಲೇಶ್ ರಾಣೆ ಹೇಳಿದ್ದರು.

ಎನ್‌ಸಿಪಿ ಪದಾಧಿಕಾರಿ ಶ್ರೀನಿವಾಸ್ ಅವರ ನೀಡಿದ ದೂರಿನ ಆಧಾರದ ಮೇಲೆ ಈ ಸಹೋದರರ ವಿರುದ್ಧ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ 120-ಬಿ (ಕ್ರಿಮಿನಲ್ ಪಿತೂರಿ), 499 (ಮಾನನಷ್ಟ), 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ ನಿತೇಶ್ ರಾಣೆ ಮತ್ತ ನಿಲೇಶ್ ರಾಣೆ ಸಹೋದರರು ಶರದ್ ಪವಾರ್ ವಿರುದ್ಧ ಮಾತನಾಡಿರುವ ಕೆಲವು ವಿಡಿಯೋ ತುಣುಕುಗಳನ್ನು ದೂರುದಾರರು ಪೊಲೀಸರಿಗೆ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಪ್ರತಿಕ್ರಿಯಿಸಿರುವ ಶಾಸಕ ನಿತೇಶ್ ರಾಣೆ, “ನಾವು ಯಾವ ಅಪರಾಧ ಮಾಡಿದ್ದೀವಿ ಎಂದು ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಗೊತ್ತಿಲ್ಲ. ನಾವು ಗಲಭೆ ಸೃಷ್ಟಿಸುವ ಕೆಲಸ ಮಾಡಿಲ್ಲ. ನಾವು ಹಿಂದುತ್ವದ ಪರ ಮಾತನಾಡುವುದು ತಪ್ಪೆ? ತಪ್ಪೆಂದರೆ ಅದನ್ನು 100 ಸಲ ಮಾಡಲು ಸಿದ್ದರಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಕ್ ಹಿಂದೂ ಎನ್ನುವ ಕಾರಣಕ್ಕೆ ರಾಜೀನಾಮೆ ಪಡೆಯಲಾಯಿತೆ? ಮುಸ್ಲಿಂ ನವಾಬ್ ಮಲ್ಲಿಕ್ ರಾಜೀನಾಮೆ ಏಕೆ ಪಡೆಯುವುದಿಲ್ಲ ಎಂದು ನಾನು ಪ್ರಶ್ನಿಸಿದೆ. ಆತ ಮುಸ್ಲಿಮ್ ಆದ ಕಾರಣ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆಯೇ ಎಂದು ಪ್ರಶ್ನಿಸಿದ್ದು ತಪ್ಪೆ ಎಂದು ನಿತೇಶ್ ರಾಣೆ ಹೇಳಿದ್ದಾರೆ.


ಇದನ್ನೂ ಓದಿ: ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...