Homeಮುಖಪುಟಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ...

ಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ ದಾಖಲು

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ ಮಹಾರಾಷ್ಟ್ರದ ಬಿಜೆಪಿ ಶಾಸಕರಾದ ನಿತೇಶ್ ರಾಣೆ ಮತ್ತು ಅವರ ಸಹೋದರರಾದ ನಿಲೇಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ ನಿತೇಶ್ ರಾಣೆ, “ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿಯ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದ್ದರೂ ಶರದ್ ಪವಾರ್ ಏಕೆ ಅವರ ರಾಜೀನಾಮೆ ಕೇಳಿಲ್ಲ” ಎಂದು ಪ್ರಶ್ನಿಸಿದ್ದರು. ಮುಂದುವರೆದು ಶರದ್ ಪವಾರ್ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂಗೆ ಸಹ ಸಹಾಯ ಮಾಡುತ್ತಾರೆ ಎಂದು ಆರೋಪಿಸಿದ್ದರು.

ಶರದ್ ಪವಾರ್‌ರವರು ನವಾಬ್ ಮಲಿಕ್ ರಾಜೀನಾಮೆ ಏಕೆ ಪಡೆದಿಲ್ಲ? ಶರದ್ ಪವಾರ್ ಮತ್ತು ದಾವೂದ್ ಇಬ್ರಾಹಿಂ ನಡುವೆ ಸಂಬಂಧವಿದೆಯೆ? ಶರದ್ ಪವಾರ್ ದಾವೂದ್ ಇಬ್ರಾಹಿಂ ಪರ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ನನಗೆ ಸಂದೇಹವಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಶರದ್ ಪವಾರ್ ಜಿ ಅವರಿಗೆ ದಾವೂದ್ ಇಬ್ರಾಹಿಂ ಬಗ್ಗೆ ತುಂಬಾ ಪ್ರೀತಿ ಇದ್ದರೆ, ಅವರು ತಮ್ಮ ಕ್ಯಾಬಿನ್‌ನಿಂದ ಗಾಂಧೀಜಿ ಫೋಟೋ ತೆಗೆದು ದಾವೂದ್ ಇಬ್ರಾಹಿಂ ಫೋಟೊ ಹಾಕಿಕೊಳ್ಳಲಿ. ನಾವು ಈ ಸರ್ಕಾರವನ್ನು ಬಯಲಿಗೆಳೆದುದ್ದಕ್ಕೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ನಿಲೇಶ್ ರಾಣೆ ಹೇಳಿದ್ದರು.

ಎನ್‌ಸಿಪಿ ಪದಾಧಿಕಾರಿ ಶ್ರೀನಿವಾಸ್ ಅವರ ನೀಡಿದ ದೂರಿನ ಆಧಾರದ ಮೇಲೆ ಈ ಸಹೋದರರ ವಿರುದ್ಧ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ 120-ಬಿ (ಕ್ರಿಮಿನಲ್ ಪಿತೂರಿ), 499 (ಮಾನನಷ್ಟ), 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ ನಿತೇಶ್ ರಾಣೆ ಮತ್ತ ನಿಲೇಶ್ ರಾಣೆ ಸಹೋದರರು ಶರದ್ ಪವಾರ್ ವಿರುದ್ಧ ಮಾತನಾಡಿರುವ ಕೆಲವು ವಿಡಿಯೋ ತುಣುಕುಗಳನ್ನು ದೂರುದಾರರು ಪೊಲೀಸರಿಗೆ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಪ್ರತಿಕ್ರಿಯಿಸಿರುವ ಶಾಸಕ ನಿತೇಶ್ ರಾಣೆ, “ನಾವು ಯಾವ ಅಪರಾಧ ಮಾಡಿದ್ದೀವಿ ಎಂದು ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಗೊತ್ತಿಲ್ಲ. ನಾವು ಗಲಭೆ ಸೃಷ್ಟಿಸುವ ಕೆಲಸ ಮಾಡಿಲ್ಲ. ನಾವು ಹಿಂದುತ್ವದ ಪರ ಮಾತನಾಡುವುದು ತಪ್ಪೆ? ತಪ್ಪೆಂದರೆ ಅದನ್ನು 100 ಸಲ ಮಾಡಲು ಸಿದ್ದರಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಕ್ ಹಿಂದೂ ಎನ್ನುವ ಕಾರಣಕ್ಕೆ ರಾಜೀನಾಮೆ ಪಡೆಯಲಾಯಿತೆ? ಮುಸ್ಲಿಂ ನವಾಬ್ ಮಲ್ಲಿಕ್ ರಾಜೀನಾಮೆ ಏಕೆ ಪಡೆಯುವುದಿಲ್ಲ ಎಂದು ನಾನು ಪ್ರಶ್ನಿಸಿದೆ. ಆತ ಮುಸ್ಲಿಮ್ ಆದ ಕಾರಣ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆಯೇ ಎಂದು ಪ್ರಶ್ನಿಸಿದ್ದು ತಪ್ಪೆ ಎಂದು ನಿತೇಶ್ ರಾಣೆ ಹೇಳಿದ್ದಾರೆ.


ಇದನ್ನೂ ಓದಿ: ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...