Homeಮುಖಪುಟಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ...

ಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ ದಾಖಲು

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ ಮಹಾರಾಷ್ಟ್ರದ ಬಿಜೆಪಿ ಶಾಸಕರಾದ ನಿತೇಶ್ ರಾಣೆ ಮತ್ತು ಅವರ ಸಹೋದರರಾದ ನಿಲೇಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ ನಿತೇಶ್ ರಾಣೆ, “ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿಯ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದ್ದರೂ ಶರದ್ ಪವಾರ್ ಏಕೆ ಅವರ ರಾಜೀನಾಮೆ ಕೇಳಿಲ್ಲ” ಎಂದು ಪ್ರಶ್ನಿಸಿದ್ದರು. ಮುಂದುವರೆದು ಶರದ್ ಪವಾರ್ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂಗೆ ಸಹ ಸಹಾಯ ಮಾಡುತ್ತಾರೆ ಎಂದು ಆರೋಪಿಸಿದ್ದರು.

ಶರದ್ ಪವಾರ್‌ರವರು ನವಾಬ್ ಮಲಿಕ್ ರಾಜೀನಾಮೆ ಏಕೆ ಪಡೆದಿಲ್ಲ? ಶರದ್ ಪವಾರ್ ಮತ್ತು ದಾವೂದ್ ಇಬ್ರಾಹಿಂ ನಡುವೆ ಸಂಬಂಧವಿದೆಯೆ? ಶರದ್ ಪವಾರ್ ದಾವೂದ್ ಇಬ್ರಾಹಿಂ ಪರ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ನನಗೆ ಸಂದೇಹವಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಶರದ್ ಪವಾರ್ ಜಿ ಅವರಿಗೆ ದಾವೂದ್ ಇಬ್ರಾಹಿಂ ಬಗ್ಗೆ ತುಂಬಾ ಪ್ರೀತಿ ಇದ್ದರೆ, ಅವರು ತಮ್ಮ ಕ್ಯಾಬಿನ್‌ನಿಂದ ಗಾಂಧೀಜಿ ಫೋಟೋ ತೆಗೆದು ದಾವೂದ್ ಇಬ್ರಾಹಿಂ ಫೋಟೊ ಹಾಕಿಕೊಳ್ಳಲಿ. ನಾವು ಈ ಸರ್ಕಾರವನ್ನು ಬಯಲಿಗೆಳೆದುದ್ದಕ್ಕೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ನಿಲೇಶ್ ರಾಣೆ ಹೇಳಿದ್ದರು.

ಎನ್‌ಸಿಪಿ ಪದಾಧಿಕಾರಿ ಶ್ರೀನಿವಾಸ್ ಅವರ ನೀಡಿದ ದೂರಿನ ಆಧಾರದ ಮೇಲೆ ಈ ಸಹೋದರರ ವಿರುದ್ಧ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ 120-ಬಿ (ಕ್ರಿಮಿನಲ್ ಪಿತೂರಿ), 499 (ಮಾನನಷ್ಟ), 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ ನಿತೇಶ್ ರಾಣೆ ಮತ್ತ ನಿಲೇಶ್ ರಾಣೆ ಸಹೋದರರು ಶರದ್ ಪವಾರ್ ವಿರುದ್ಧ ಮಾತನಾಡಿರುವ ಕೆಲವು ವಿಡಿಯೋ ತುಣುಕುಗಳನ್ನು ದೂರುದಾರರು ಪೊಲೀಸರಿಗೆ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಪ್ರತಿಕ್ರಿಯಿಸಿರುವ ಶಾಸಕ ನಿತೇಶ್ ರಾಣೆ, “ನಾವು ಯಾವ ಅಪರಾಧ ಮಾಡಿದ್ದೀವಿ ಎಂದು ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಗೊತ್ತಿಲ್ಲ. ನಾವು ಗಲಭೆ ಸೃಷ್ಟಿಸುವ ಕೆಲಸ ಮಾಡಿಲ್ಲ. ನಾವು ಹಿಂದುತ್ವದ ಪರ ಮಾತನಾಡುವುದು ತಪ್ಪೆ? ತಪ್ಪೆಂದರೆ ಅದನ್ನು 100 ಸಲ ಮಾಡಲು ಸಿದ್ದರಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಕ್ ಹಿಂದೂ ಎನ್ನುವ ಕಾರಣಕ್ಕೆ ರಾಜೀನಾಮೆ ಪಡೆಯಲಾಯಿತೆ? ಮುಸ್ಲಿಂ ನವಾಬ್ ಮಲ್ಲಿಕ್ ರಾಜೀನಾಮೆ ಏಕೆ ಪಡೆಯುವುದಿಲ್ಲ ಎಂದು ನಾನು ಪ್ರಶ್ನಿಸಿದೆ. ಆತ ಮುಸ್ಲಿಮ್ ಆದ ಕಾರಣ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆಯೇ ಎಂದು ಪ್ರಶ್ನಿಸಿದ್ದು ತಪ್ಪೆ ಎಂದು ನಿತೇಶ್ ರಾಣೆ ಹೇಳಿದ್ದಾರೆ.


ಇದನ್ನೂ ಓದಿ: ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...