Homeರಾಜಕೀಯಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಉದ್ಧವ್‌ ಠಾಕ್ರೆಗೆ ತೊಂದರೆ ನೀಡಿದ ಎಲ್ಲರೂ ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ, ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಶನಿವಾರ ಗುವಾಹಟಿಯಲ್ಲಿ ಸಭೆ ನಡೆಸಿ, ಏಕನಾಥ್ ಶಿಂಧೆ ನೇತೃತ್ವದ ತಮ್ಮ ಬಣವನ್ನು ‘ಶಿವಸೇನೆ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಸುವುದಾಗಿ ಘೋಷಿಸಿದೆ. ಈ ನಡುವೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಪುಣೆಯ ಕಚೇರಿಗೆ ಶಿವಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ.

ತಾನಾಜಿ ಸಾವಂತ್ ಕಚೇರಿಗೆ ದಾಳಿ ಮಾಡಿರುವುದನ್ನು ಸಮರ್ಥಿಸಿರುವ ಪುಣೆ ಶಿವಸೇನೆ ಮುಖ್ಯಸ್ಥ ಸಂಜಯ್ ಮೋರೆ, “ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದರು. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗುವುದು… ಯಾರನ್ನೂ ಬಿಡಲಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಧ್ಯಕ್ಕೆ ಗುವಾಹಟಿಯಲ್ಲಿರುವ ಬಂಡಾಯ ಶಾಸಕರ ನಾಯಕ ಏಕನಾಥ್‌ ಶಿಂಧೆ ಅವರು, ಬಂಡಾಯವೆದ್ದಿರುವ ಪಕ್ಷದ ಶಾಸಕರ ರಕ್ಷಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರು ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ 16 ಶಾಸಕರ ಸಹಿ ಇರುವ ಪತ್ರವನ್ನು ಟ್ವೀಟ್ ಮಾಡಿರುವ ಶಿಂಧೆ, ತಮ್ಮ ಕುಟುಂಬ ಸದಸ್ಯರಿಗೆ ಯಾವುದೇ ಹಾನಿ ಉಂಟಾದರೆ ಸಿಎಂ ಠಾಕ್ರೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಾಯಕರು ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ. ಠಾಕ್ರೆ ಮತ್ತು ವಾಲ್ಸೆ ಪಾಟೀಲ್ ಅವರ ಆದೇಶದ ಮೇರೆಗೆ 16 ಬಂಡಾಯ ಸೇನಾ ಶಾಸಕರ ಭದ್ರತೆಯನ್ನು ‘ರಾಜಕೀಯ ಸೇಡಿನಿಂದಾಗಿ’  ಹಿಂಪಡೆಯಲಾಗಿದೆ ಎಂದು ಶಿಂಧೆ ತಮ್ಮ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಆದರೆ ಈ ಹೇಳಿಕೆಯನ್ನು ನಿರಾಕರಿಸಿರುವ ರಾಜ್ಯದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ರಾಜ್ಯದ ಯಾವುದೇ ಶಾಸಕರ ರಕ್ಷಣೆಗೆ ಮುಖ್ಯಮಂತ್ರಿಯಾಗಲಿ, ಗೃಹ ಇಲಾಖೆಯಾಗಲಿ ಆದೇಶ ನೀಡಿಲ್ಲ. ಈ ನಿಟ್ಟಿನಲ್ಲಿ ಟ್ವಿಟರ್‌ನಲ್ಲಿ ಮಾಡಿರುವ ಆರೋಪಗಳು ಸಂಪೂರ್ಣ ತಪ್ಪು ಮತ್ತು ದಾರಿತಪ್ಪಿಸುವಂತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ನಾವು ಬೆಂಬಲಿಸುತ್ತೇವೆ: ಕೇಂದ್ರ ಸಚಿವ ಅಠವಳೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸರ್ಕಾರ ರಚಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠವಳೆ ಶುಕ್ರವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, “ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅವರನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಸರ್ಕಾರ ರಚಿಸುವ ಬಗ್ಗೆ ಯೋಚಿಸಿಲ್ಲ, ಮುಂಬರುವ ಸಮಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಶರದ್ ಪವಾರ್, ಅಜಿತ್ ಪವಾರ್, ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಬಹುಮತವನ್ನು ತೋರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹಲವಾರು ಶಾಸಕರು ನಿಮ್ಮನ್ನು ತೊರೆದಿದ್ದಾರೆ, ನೀವು ಅದನ್ನು ಹೇಗೆ ಹೇಳುತ್ತೀರಿ?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಪಕ್ಷ ದೊಡ್ಡದು, ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್

ಪಕ್ಷದ ಭವಿಷ್ಯ ಮತ್ತು ವಿಸ್ತರಣೆಯ ಯೋಜನೆಗಳ ಕುರಿತು ಚರ್ಚಿಸಲು ಶಿವಸೇನೆ ಸಭೆ ನಡೆಸಲಿದೆ ಎಂದು ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ಪಕ್ಷವು ತುಂಬಾ ದೊಡ್ಡದಾಗಿದ್ದು, ಅದನ್ನು ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ. ಇದು ನಮ್ಮ ರಕ್ತದಿಂದ ಕಟ್ಟಲ್ಪಟ್ಟಿದೆ. ಅದನ್ನು ಮಾಡಲು ಹಲವಾರು ತ್ಯಾಗ ಮಾಡಲಾಗಿದೆ. ಹಣದಿಂದ ಯಾರೂ ಅದನ್ನು ಮುರಿಯಲು ಸಾಧ್ಯವಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ, ಎನ್‌ಸಿಪಿ

ಪ್ರಸ್ತುತ ಅಸ್ಸಾಂನಲ್ಲಿ ಮೊಕ್ಕಾಂ ಹೂಡಿರುವ ಶಿವಸೇನೆಯ ಬಂಡಾಯ ಶಾಸಕರು ಉಳಿದಿದ್ದ ಗುವಾಹಟಿ ಮತ್ತು ಸೂರತ್‌ನಲ್ಲಿನ ಹೋಟೆಲ್‌ಗಳ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ ಎಂದು ಎನ್‌ಸಿಪಿ ಪ್ರಶ್ನಸಿದೆ. ಪಕ್ಷವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಒಳಗೊಂಡಂತೆ ಇಲಾಖೆಗಳಿಗೆ ‘ಕಪ್ಪುಹಣದ’ ಮೂಲವನ್ನು ಕಂಡುಹಿಡಿಯಲು ಕೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಎನ್‌ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ, “ಸೂರತ್ ಮತ್ತು ಗುವಾಹಟಿಯ ಹೋಟೆಲ್‌ಗಳು ಮತ್ತು ಚಾರ್ಟರ್ಡ್ ಫ್ಲೈಟ್‌ನ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ? ಕುದುರೆ ವ್ಯಾಪಾರದ ದರ 50 ಕೋಟಿ ರೂಪಾಯಿಗಳು ನಿಜವೇ? ಇಡಿ ಮತ್ತು ಐಟಿ ಸಕ್ರಿಯಗೊಂಡರೆ ಕಪ್ಪು ಹಣದ ಮೂಲ ಬಯಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...