Homeರಾಜಕೀಯಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ಉದ್ಧವ್‌ ಠಾಕ್ರೆಗೆ ತೊಂದರೆ ನೀಡಿದ ಎಲ್ಲರೂ ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ, ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆ ಶಾಸಕರು ಶನಿವಾರ ಗುವಾಹಟಿಯಲ್ಲಿ ಸಭೆ ನಡೆಸಿ, ಏಕನಾಥ್ ಶಿಂಧೆ ನೇತೃತ್ವದ ತಮ್ಮ ಬಣವನ್ನು ‘ಶಿವಸೇನೆ ಬಾಳಾಸಾಹೇಬ್ ಗ್ರೂಪ್’ ಎಂದು ಹೆಸರಿಸುವುದಾಗಿ ಘೋಷಿಸಿದೆ. ಈ ನಡುವೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿವಸೇನೆ ಶಾಸಕ ತಾನಾಜಿ ಸಾವಂತ್ ಅವರ ಪುಣೆಯ ಕಚೇರಿಗೆ ಶಿವಸೇನೆ ಕಾರ್ಯಕರ್ತರು ಶನಿವಾರ ದಾಳಿ ನಡೆಸಿದ್ದಾರೆ.

ತಾನಾಜಿ ಸಾವಂತ್ ಕಚೇರಿಗೆ ದಾಳಿ ಮಾಡಿರುವುದನ್ನು ಸಮರ್ಥಿಸಿರುವ ಪುಣೆ ಶಿವಸೇನೆ ಮುಖ್ಯಸ್ಥ ಸಂಜಯ್ ಮೋರೆ, “ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದರು. ನಮ್ಮ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ತೊಂದರೆ ನೀಡಿದ ಎಲ್ಲಾ ದೇಶದ್ರೋಹಿಗಳು ಮತ್ತು ಬಂಡಾಯ ಶಾಸಕರು ಈ ರೀತಿಯ ಕ್ರಮವನ್ನು ಎದುರಿಸಬೇಕಾಗುತ್ತದೆ. ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗುವುದು… ಯಾರನ್ನೂ ಬಿಡಲಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಧ್ಯಕ್ಕೆ ಗುವಾಹಟಿಯಲ್ಲಿರುವ ಬಂಡಾಯ ಶಾಸಕರ ನಾಯಕ ಏಕನಾಥ್‌ ಶಿಂಧೆ ಅವರು, ಬಂಡಾಯವೆದ್ದಿರುವ ಪಕ್ಷದ ಶಾಸಕರ ರಕ್ಷಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ರಾಜ್ಯದ ಗೃಹ ಸಚಿವರು ಹಿಂಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ 16 ಶಾಸಕರ ಸಹಿ ಇರುವ ಪತ್ರವನ್ನು ಟ್ವೀಟ್ ಮಾಡಿರುವ ಶಿಂಧೆ, ತಮ್ಮ ಕುಟುಂಬ ಸದಸ್ಯರಿಗೆ ಯಾವುದೇ ಹಾನಿ ಉಂಟಾದರೆ ಸಿಎಂ ಠಾಕ್ರೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಾಯಕರು ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ. ಠಾಕ್ರೆ ಮತ್ತು ವಾಲ್ಸೆ ಪಾಟೀಲ್ ಅವರ ಆದೇಶದ ಮೇರೆಗೆ 16 ಬಂಡಾಯ ಸೇನಾ ಶಾಸಕರ ಭದ್ರತೆಯನ್ನು ‘ರಾಜಕೀಯ ಸೇಡಿನಿಂದಾಗಿ’  ಹಿಂಪಡೆಯಲಾಗಿದೆ ಎಂದು ಶಿಂಧೆ ತಮ್ಮ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಆದರೆ ಈ ಹೇಳಿಕೆಯನ್ನು ನಿರಾಕರಿಸಿರುವ ರಾಜ್ಯದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, “ರಾಜ್ಯದ ಯಾವುದೇ ಶಾಸಕರ ರಕ್ಷಣೆಗೆ ಮುಖ್ಯಮಂತ್ರಿಯಾಗಲಿ, ಗೃಹ ಇಲಾಖೆಯಾಗಲಿ ಆದೇಶ ನೀಡಿಲ್ಲ. ಈ ನಿಟ್ಟಿನಲ್ಲಿ ಟ್ವಿಟರ್‌ನಲ್ಲಿ ಮಾಡಿರುವ ಆರೋಪಗಳು ಸಂಪೂರ್ಣ ತಪ್ಪು ಮತ್ತು ದಾರಿತಪ್ಪಿಸುವಂತಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ನಾವು ಬೆಂಬಲಿಸುತ್ತೇವೆ: ಕೇಂದ್ರ ಸಚಿವ ಅಠವಳೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸರ್ಕಾರ ರಚಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಸಚಿವ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠವಳೆ ಶುಕ್ರವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, “ಏಕನಾಥ್ ಶಿಂಧೆ ಅವರಿಗೆ ತೊಂದರೆಯಾದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅವರನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಸರ್ಕಾರ ರಚಿಸುವ ಬಗ್ಗೆ ಯೋಚಿಸಿಲ್ಲ, ಮುಂಬರುವ ಸಮಯದಲ್ಲಿ ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಶರದ್ ಪವಾರ್, ಅಜಿತ್ ಪವಾರ್, ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರು ಬಹುಮತವನ್ನು ತೋರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹಲವಾರು ಶಾಸಕರು ನಿಮ್ಮನ್ನು ತೊರೆದಿದ್ದಾರೆ, ನೀವು ಅದನ್ನು ಹೇಗೆ ಹೇಳುತ್ತೀರಿ?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಪಕ್ಷ ದೊಡ್ಡದು, ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್

ಪಕ್ಷದ ಭವಿಷ್ಯ ಮತ್ತು ವಿಸ್ತರಣೆಯ ಯೋಜನೆಗಳ ಕುರಿತು ಚರ್ಚಿಸಲು ಶಿವಸೇನೆ ಸಭೆ ನಡೆಸಲಿದೆ ಎಂದು ಹಿರಿಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ಪಕ್ಷವು ತುಂಬಾ ದೊಡ್ಡದಾಗಿದ್ದು, ಅದನ್ನು ಅಷ್ಟು ಸುಲಭವಾಗಿ ಹೈಜಾಕ್ ಮಾಡಲು ಸಾಧ್ಯವಿಲ್ಲ. ಇದು ನಮ್ಮ ರಕ್ತದಿಂದ ಕಟ್ಟಲ್ಪಟ್ಟಿದೆ. ಅದನ್ನು ಮಾಡಲು ಹಲವಾರು ತ್ಯಾಗ ಮಾಡಲಾಗಿದೆ. ಹಣದಿಂದ ಯಾರೂ ಅದನ್ನು ಮುರಿಯಲು ಸಾಧ್ಯವಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಗುವಾಹಟಿ, ಸೂರತ್‌ನಲ್ಲಿ ಹೋಟೆಲ್ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ, ಎನ್‌ಸಿಪಿ

ಪ್ರಸ್ತುತ ಅಸ್ಸಾಂನಲ್ಲಿ ಮೊಕ್ಕಾಂ ಹೂಡಿರುವ ಶಿವಸೇನೆಯ ಬಂಡಾಯ ಶಾಸಕರು ಉಳಿದಿದ್ದ ಗುವಾಹಟಿ ಮತ್ತು ಸೂರತ್‌ನಲ್ಲಿನ ಹೋಟೆಲ್‌ಗಳ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ ಎಂದು ಎನ್‌ಸಿಪಿ ಪ್ರಶ್ನಸಿದೆ. ಪಕ್ಷವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಒಳಗೊಂಡಂತೆ ಇಲಾಖೆಗಳಿಗೆ ‘ಕಪ್ಪುಹಣದ’ ಮೂಲವನ್ನು ಕಂಡುಹಿಡಿಯಲು ಕೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಎನ್‌ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ, “ಸೂರತ್ ಮತ್ತು ಗುವಾಹಟಿಯ ಹೋಟೆಲ್‌ಗಳು ಮತ್ತು ಚಾರ್ಟರ್ಡ್ ಫ್ಲೈಟ್‌ನ ಬಿಲ್‌ಗಳನ್ನು ಯಾರು ಪಾವತಿಸುತ್ತಿದ್ದಾರೆ? ಕುದುರೆ ವ್ಯಾಪಾರದ ದರ 50 ಕೋಟಿ ರೂಪಾಯಿಗಳು ನಿಜವೇ? ಇಡಿ ಮತ್ತು ಐಟಿ ಸಕ್ರಿಯಗೊಂಡರೆ ಕಪ್ಪು ಹಣದ ಮೂಲ ಬಯಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...