Homeಮುಖಪುಟಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

ಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

- Advertisement -
- Advertisement -

ಮುಂಬೈನ ಸರ್ಕಾರಿ ಕ್ಯಾಂಟೀನ್‌ವೊಂದರಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್ ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಶಿವಸೇನೆ (ಯುಬಿಟಿ)ಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಯ ಕಪಾಳ ಬಾರಿಸಿರುವುದು ಮತ್ತು ಬಲವಾಗಿ ಗುದ್ದಿರುವುದನ್ನು ನೋಡಬಹುದು.

“ಶಾಹ್ ಸೇನಾದ ಶಾಸಕ ಸಂಜಯ್ ಗಾಯಕ್ವಾಡ್ ಅವರನ್ನು ನೋಡಿ. ಕಳೆದ ವರ್ಷ, ಅವರು ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದರು ಮತ್ತು ಬೆದರಿಕೆ ಹಾಕಿದ್ದರು. ಈಗ ಆ ವ್ಯಕ್ತಿ ಬಡ, ಅಸಹಾಯಕ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಆದರೆ, ಸ್ವಲ್ಪ ಕಾಯಿರಿ – ಅವರು ಬಿಜೆಪಿ ಮಿತ್ರರಾಗಿರುವುದರಿಂದ ಯಾವುದೇ ಟಿವಿ ಸುದ್ದಿಗಳ ಆರ್ಭಟಿಸುತ್ತಿಲ್ಲ” ಎಂದು ಪ್ರಿಯಾಂಕಾ ಚತುರ್ವೇದಿ ಬರೆದುಕೊಂಡಿದ್ದಾರೆ.

ಈ ನಡುವೆ, ಹಲ್ಲೆ ಮಾಡಿರುವ ಬಗ್ಗೆ ತನಗೆ ‘ಯಾವುದೇ ವಿಷಾದವಿಲ್ಲ’ ಮತ್ತು ಯಾರಾದರೂ ಪ್ರಜಾಪ್ರಭುತ್ವದ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ ‘ಇದನ್ನು ಪುನರಾವರ್ತಿಸುತ್ತೇನೆ’ ಎಂದು ಶಾಸಕ ಗಾಯಕ್ವಾಡ್ ಹೇಳಿದ್ದಾರೆ.

“ರಾಜ್ಯದ ವಿವಿದೆಡೆಗಳಿಂದ ಜನರು ಇಲ್ಲಿಗೆ ಬರುತ್ತಾರೆ. ಕಾರ್ಮಿಕರು, ಅಧಿಕಾರಿಗಳು, ಎಲ್ಲರೂ ಇಲ್ಲಿಗೆ ಆಹಾರ ಸೇವಿಸಲು ಆಗಮಿಸುತ್ತಾರೆ. ಇದು ಸರ್ಕಾರಿ ಕ್ಯಾಂಟೀನ್ ಆಗಿರುವುದರಿಂದ ಇಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿರಬೇಕು. ನಾನು ಮಾಡಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಸಾರ್ವಜನಿಕ ಪ್ರತಿನಿಧಿ” ಎಂದು ಗಾಯಕ್ವಾಡ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಯಾರಾದರೂ ಪ್ರಜಾಪ್ರಭುತ್ವ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ ನಾನು ಈ ರೀತಿಯ ಭಾಷೆಯನ್ನು ಬಳಸಬೇಕಾಗುತ್ತದೆ. ಅವರು ಮರಾಠಿ ಮಾತನಾಡುತ್ತಾರಾ ಅಥವಾ ಹಿಂದಿ ಮಾತನಾಡುತ್ತಾರಾ ಎಂದು ನೋಡಿ ನಾನು ಥಳಿಸಲಿಲ್ಲ” ಎಂದಿದ್ದಾರೆ.

ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದೇನೆ. ನಾನು ಅದನ್ನು ಪುನರಾವರ್ತಿಸುತ್ತೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಕಳೆದ ವರ್ಷ, ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ಗಾಯಕ್ವಾಡ್ ಸುದ್ದಿಯಾಗಿದ್ದರು.

ಈ ವರ್ಷದ ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಭುಗಿಲೆದ್ದಿರುವ ಮಧ್ಯೆ ಶಾಸಕ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಹಿಂದಿ vs ಮರಾಠಿ ಚರ್ಚೆಗಳು ತೀವ್ರಗೊಂಡಿದೆ. ರಾಜ್ಯದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗಳಿಗೆ ರಾಜಕೀಯ ನಾಯಕರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳವಾರ ಮುಂಬೈ ಬಳಿಯ ಮೀರಾ ಭಯಂದರ್ ಪ್ರದೇಶದಲ್ಲಿ ಮರಾಠಿ ಅಸ್ಮಿತೆ ರಕ್ಷಿಸಲು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಮರಾಠಿಯಲ್ಲಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯ ನಡುವೆ ಪ್ರತಿಭಟನೆ ನಡೆದಿದೆ.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...