Homeಮುಖಪುಟಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

ಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

- Advertisement -
- Advertisement -

ಮುಂಬೈನ ಸರ್ಕಾರಿ ಕ್ಯಾಂಟೀನ್‌ವೊಂದರಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್ ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಶಿವಸೇನೆ (ಯುಬಿಟಿ)ಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಯ ಕಪಾಳ ಬಾರಿಸಿರುವುದು ಮತ್ತು ಬಲವಾಗಿ ಗುದ್ದಿರುವುದನ್ನು ನೋಡಬಹುದು.

“ಶಾಹ್ ಸೇನಾದ ಶಾಸಕ ಸಂಜಯ್ ಗಾಯಕ್ವಾಡ್ ಅವರನ್ನು ನೋಡಿ. ಕಳೆದ ವರ್ಷ, ಅವರು ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದರು ಮತ್ತು ಬೆದರಿಕೆ ಹಾಕಿದ್ದರು. ಈಗ ಆ ವ್ಯಕ್ತಿ ಬಡ, ಅಸಹಾಯಕ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಆದರೆ, ಸ್ವಲ್ಪ ಕಾಯಿರಿ – ಅವರು ಬಿಜೆಪಿ ಮಿತ್ರರಾಗಿರುವುದರಿಂದ ಯಾವುದೇ ಟಿವಿ ಸುದ್ದಿಗಳ ಆರ್ಭಟಿಸುತ್ತಿಲ್ಲ” ಎಂದು ಪ್ರಿಯಾಂಕಾ ಚತುರ್ವೇದಿ ಬರೆದುಕೊಂಡಿದ್ದಾರೆ.

ಈ ನಡುವೆ, ಹಲ್ಲೆ ಮಾಡಿರುವ ಬಗ್ಗೆ ತನಗೆ ‘ಯಾವುದೇ ವಿಷಾದವಿಲ್ಲ’ ಮತ್ತು ಯಾರಾದರೂ ಪ್ರಜಾಪ್ರಭುತ್ವದ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ ‘ಇದನ್ನು ಪುನರಾವರ್ತಿಸುತ್ತೇನೆ’ ಎಂದು ಶಾಸಕ ಗಾಯಕ್ವಾಡ್ ಹೇಳಿದ್ದಾರೆ.

“ರಾಜ್ಯದ ವಿವಿದೆಡೆಗಳಿಂದ ಜನರು ಇಲ್ಲಿಗೆ ಬರುತ್ತಾರೆ. ಕಾರ್ಮಿಕರು, ಅಧಿಕಾರಿಗಳು, ಎಲ್ಲರೂ ಇಲ್ಲಿಗೆ ಆಹಾರ ಸೇವಿಸಲು ಆಗಮಿಸುತ್ತಾರೆ. ಇದು ಸರ್ಕಾರಿ ಕ್ಯಾಂಟೀನ್ ಆಗಿರುವುದರಿಂದ ಇಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿರಬೇಕು. ನಾನು ಮಾಡಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಸಾರ್ವಜನಿಕ ಪ್ರತಿನಿಧಿ” ಎಂದು ಗಾಯಕ್ವಾಡ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಯಾರಾದರೂ ಪ್ರಜಾಪ್ರಭುತ್ವ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ ನಾನು ಈ ರೀತಿಯ ಭಾಷೆಯನ್ನು ಬಳಸಬೇಕಾಗುತ್ತದೆ. ಅವರು ಮರಾಠಿ ಮಾತನಾಡುತ್ತಾರಾ ಅಥವಾ ಹಿಂದಿ ಮಾತನಾಡುತ್ತಾರಾ ಎಂದು ನೋಡಿ ನಾನು ಥಳಿಸಲಿಲ್ಲ” ಎಂದಿದ್ದಾರೆ.

ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದೇನೆ. ನಾನು ಅದನ್ನು ಪುನರಾವರ್ತಿಸುತ್ತೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಕಳೆದ ವರ್ಷ, ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ಗಾಯಕ್ವಾಡ್ ಸುದ್ದಿಯಾಗಿದ್ದರು.

ಈ ವರ್ಷದ ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಭುಗಿಲೆದ್ದಿರುವ ಮಧ್ಯೆ ಶಾಸಕ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಹಿಂದಿ vs ಮರಾಠಿ ಚರ್ಚೆಗಳು ತೀವ್ರಗೊಂಡಿದೆ. ರಾಜ್ಯದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗಳಿಗೆ ರಾಜಕೀಯ ನಾಯಕರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳವಾರ ಮುಂಬೈ ಬಳಿಯ ಮೀರಾ ಭಯಂದರ್ ಪ್ರದೇಶದಲ್ಲಿ ಮರಾಠಿ ಅಸ್ಮಿತೆ ರಕ್ಷಿಸಲು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಮರಾಠಿಯಲ್ಲಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯ ನಡುವೆ ಪ್ರತಿಭಟನೆ ನಡೆದಿದೆ.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...